ಶಶಿ ತರೂರ್ 
ಪ್ರಧಾನ ಸುದ್ದಿ

ಸುನಂದಾ ಸಾವು ದುಷ್ಕೃತ್ಯವೆಂದು ನಾನು ಊಹಿಸಿರಲಿಲ್ಲ: ಶಶಿ ತರೂರ್

ಮಾಜಿ ಕೇಂದ್ರ ಸಚಿವ ಹಾಗು ಸಂಸದ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರದ್ದು ಸಹಜ ಸಾವು ಅಲ್ಲ...

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗು ಸಂಸದ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರದ್ದು ಸಹಜ ಸಾವು ಅಲ್ಲ, ಅದೊಂದು ಕೊಲೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಶಿ ತರೂರ್ ಅವರನ್ನು ಕೂಡಾ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.

ಸುನಂದಾ ಪುಷ್ಕರ್ ಅವರದ್ದು ಅಸಹಜ ಸಾವು ಎಂಬ ಸುದ್ದಿ ಶಶಿ ತರೂರ್‌ನ್ನು ಬೆಚ್ಚಿ ಬೀಳಿಸಿದೆ. ಈ ಬಗ್ಗೆ ಶಶಿ ತರೂರ್ ತಮ್ಮ ಫೇಸ್‌ಬುಕ್ ಅಧಿಕೃತ ಪುಟದಲ್ಲಿ "ನನ್ನ ಪತ್ನಿ ಸುನಂದಾ ಪುಷ್ಕರ್ ಸಾವಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅನಾಮಿಕ ವ್ಯಕ್ತಿಯೊಬ್ಬರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂಬ ವಿಷಯ ತಿಳಿದು ನಾನು ಆಶ್ಚರ್ಯಚಕಿತನಾಗಿದ್ದೇನೆ. ಪ್ರಸ್ತುತ ಪ್ರಕರಣದ ತನಿಖೆ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ನನಗೆ ಕುತೂಹಲವಿದೆ ಮಾತ್ರವಲ್ಲದೆ ತನಿಖೆಗೆ ನನ್ನ ಸಂಪೂರ್ಣ ಸಹಕಾರವಿದೆ. ನನ್ನ ಪತ್ನಿಯ ಸಾವು ದುಷ್ಕೃತ್ಯವಾಗಿರಬಹುದೆಂದು ನಾನು ಊಹಿಸಿರಲಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಬೇಕಾಗಿದ್ದು, ಸತ್ಯಾಸತ್ಯತೆ ಆದಷ್ಟು ಬೇಗ ಹೊರಬರಬೇಕಾಗಿದೆ.

ಇತ್ತೀಚೆಗೆ ನಾನು ಸುನಂದಾ ಅವರ ಕುಟುಂಬವನ್ನು ಭೇಟಿ ಮಾಡಿ, ಅವರಿಂದ ಎಲ್ಲ ವಿವರಗಳನ್ನು ಪಡೆದುಕೊಂಡಿದ್ದೇನೆ.  ಸುನಂದಾ ಅವರ ಮರಣೋತ್ತರ ಪರೀಕ್ಷೆಯ ಪ್ರತಿ ಹಾಗೂ ಈ ಬಗ್ಗೆ ತನಿಖೆ ನಡೆಸಿದ ಸಿಎಫ್‌ಎಸ್ ಎಲ್  ವರದಿಯ ಪ್ರತಿ ಇಲ್ಲಿಯವರೆಗೆ ನಮ್ಮ ಕೈಸೇರಿಲ್ಲ. ಈ ಎಲ್ಲ ವರದಿಗಳ ಪ್ರತಿಗಳನ್ನು ನಮಗೆ ಆದಷ್ಟು ಬೇಗ ನೀಡಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ ''ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!