ಸ್ಮೃತಿ ಇರಾನಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನಾನು ಹೋಟೆಲ್‌ನಲ್ಲಿ ಪಾತ್ರೆ ತೊಳೆದಿದ್ದೆ: ಸ್ಮೃತಿ ಇರಾನಿ

ನಾನು ನನ್ನ ಕನಸನ್ನು ನನಸಾಗಿಸಲು...

ನವದೆಹಲಿ: ನಾನು ನನ್ನ ಕನಸನ್ನು ನನಸಾಗಿಸಲು ಬಂದಾಗ ಮುಂಬೈನ ಹೋಟೆಲೊಂದರಲ್ಲಿ ಪಾತ್ರೆ ತೊಳೆದಿದ್ದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ  ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

15 ವರ್ಷಗಳ ಹಿಂದೆ ನಾನು ಮುಂಬೈಯ ಹೋಟೆಲ್‌ನಲ್ಲಿ ಪಾತ್ರೆ ತೊಳೆದಿದ್ದೆ. ಒಬ್ಬ ಸಚಿವೆಯಾಗಿ ನಾನೀಗ ಇದನ್ನು ನೆನಪಿಸಿಕೊಂಡು ಹೆಮ್ಮೆ ಪಡುತ್ತೇನೆ. ಈ ಬಗ್ಗೆ ನನಗೆ ಯಾವುದೇ ನಾಚಿಕೆಯಿಲ್ಲ. ಎಲ್ಲ ರೀತಿಯ ಶ್ರಮ ದುಡಿಮೆಗಳನ್ನು ಗೌರವಿಸುವ ಸಂಸ್ಕೃತಿ ನಮ್ಮದು. ಇದು ಆಕಾಂಕ್ಷೆಗಳನ್ನು ಗೌರವಿಸುವ ದೇಶ. ಆದ್ದರಿಂದ ಯಾರೂ ತಮ್ಮ ಪೂರ್ವ ಕೆಲಸದ ಬಗ್ಗೆ ಕೀಳರಿಮೆ ಹೊಂದುವ ಅಗತ್ಯವಿಲ್ಲ ಎಂದು ಸಚಿವೆ ಹೇಳಿದ್ದಾರೆ.

ರಾಜ್ಯ ಶಿಕ್ಷಣ ಸಚಿವರುಗಳ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು ಮೇಕ್ ಇನ್ ಇಂಡಿಯಾ ಯೋಜನೆಯನ್ನು ಉಲ್ಲೇಖಿಸುತ್ತಾ, ಕೌಶಲ್ಯ ಭರಿತ ಭಾರತವನ್ನು ಉದ್ಯಮ ಬಯಸುತ್ತದೆ ಎಂದಿದ್ದಾರೆ.

ಕೌಶಲ್ಯ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಎಷ್ಟು ಮಹತ್ವ ನೀಡುತ್ತಿದ್ದಾರೆ ಎಂಬುದನ್ನು ವಿವರಿಸಿದ ಸಚಿವೆ, ಒಬ್ಬ ಪ್ಲಂಬರ್ ಅಥವಾ ಮೆಕ್ಯಾನಿಕ್ ಆಗಿರುವುದಕ್ಕೆ ಯಾರೂ ಕೀಳರಿಮೆ ಹೊಂದಬೇಕಿಲ್ಲ. ಇಲ್ಲಿ ಶ್ರಮದ ಗೌರವ ಅತ್ಯಂತ ಮಹತ್ವದ್ದಾಗುತ್ತದೆ. ಸಮಾಜವು ಎಲ್ಲ ಶ್ರಮಗಳನ್ನು ಗೌರವಿಸಲು ತೊಡಗಿದಾಗ ಶ್ರಮಕ್ಕೆ ಘನತೆ ತಾನಾಗಿಯೇ ಬರುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT