ಶಶಿ ತರೂರ್-ಸುನಂದಾ 
ಪ್ರಧಾನ ಸುದ್ದಿ

ಸುನಂದಾ ಹಾಗೂ ಶಶಿ ತರೂರ್ ನಡುವಿನ ಸಂಬಂಧ ಹದಗೆಟ್ಟಿತ್ತು!

ಸುನಂದಾ ಪುಷ್ಕರ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿ ಪೊಲೀಸರು, ಮಾಜಿ ಕೇಂದ್ರ ...

ನವದೆಹಲಿ: ಸುನಂದಾ ಪುಷ್ಕರ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿ ಪೊಲೀಸರು, ಮಾಜಿ ಕೇಂದ್ರ ಸಚಿವ, ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಸುನಂದಾ ಪುಷ್ಕರ್ ದಾಂಪತ್ಯಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಈ ಸಂಬಂಧ ದೆಹಲಿ ಪೊಲೀಸ್ ವಿಶೇಷ ತನಿಖಾ ತಂಡ ಶಶಿ ತರೂರ್ ನಿವಾಸದ ಅಡುಗೆ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ತರೂರ್ ದಂಪತಿಗಳ ನಡುವಿನ ಸಂಬಂಧ ಹದಗೆಟ್ಟಿತ್ತು, ತರೂರ್ ವರ್ತನೆಯನ್ನು ಸುನಂದಾ ಆಕ್ಷೇಪಿಸುತ್ತಿದ್ದರು ಮತ್ತು ಅವರ ವರ್ತನೆಯಿಂದ ತೀವ್ರ ಬೇಸರಗೊಂಡಿದ್ದರು. ಇಬ್ಬರೂ ಜತೆಯಲ್ಲಿ ವಾಸಿಸುತ್ತಿದ್ದರೂ ಹೊಂದಾಣಿ ಇರಲಿಲ್ಲ. ಸುನಂದಾ ಸಾವಿಗೂ ಮುನ್ನ ಹಣಕಾಸು ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿತ್ತು ಎಂದು ಅಡುಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿದ್ದ ತರೂರ್ ಮನೆ ಕೆಲಸದಾತ ನಾರಾಯಣ್ ಸಿಂಗ್‌ರನ್ನು ತನಿಖಾ ತಂಡ ಇಂದು ದೆಹಲಿಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದು, ಸುನಂದಾ ಸಾವಿಗೂ ಎರಡು ದಿನ ಮುನ್ನ ಅವರ ಜತೆ ಅಪರಿಚಿತ ವ್ಯಕ್ತಿಯೊಬ್ಬ ಅದೇ ಹೋಟೆಲ್‌ನಲ್ಲಿ ತಂಗಿದ್ದ ಎಂದು ನಾರಾಯಣ್ ಸಿಂಗ್ ಹೇಳಿದ್ದಾನೆ. ಅಲ್ಲದೆ ಅತನ ಹೆಸರು ಸುನೀಲ್ ಸಾಹೆಬ್ ಎಂದು ಸಹ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್. ಬಸ್ಸಿ ಅವರು, ಮೂರ್ನಾಲ್ಕು ದಿನಗಳಲ್ಲಿ ಸುದ್ದಿಗೋಷ್ಠಿ ನಡೆಸಿ, ಹತ್ಯೆ ಸಂಬಂಧ ಲಭ್ಯವಾಗಿರುವ ಎಲ್ಲಾ ಮಾಹಿತಿಯನ್ನು ಬಹಿರಂಗ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಮಧ್ಯೆ ಅಡುಗೆ ಸಿಬ್ಬಂದಿ ನೀಡಿರುವ ಮಾಹಿತಿಯನ್ನು ಆಧರಿಸಿ, ಸುನೀಲ್ ಸಾಹೆಬ್ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಳೆದ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 52 ವರ್ಷದ ಸುನಂದಾ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಡಿ.29ರಂದು ನೀಡಿರುವ ಅಂತಿಮ ವೈದ್ಯಕೀಯ ವರದಿ 'ಸುನಂದಾ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು ಅಸಹಜ ಸಾವು' ಎಂದು ಹೇಳಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT