ಸಿದ್ದರಾಮಯ್ಯ -ಜಗದೀಶ್ ಶೆಟ್ಟರ್ 
ಪ್ರಧಾನ ಸುದ್ದಿ

ಸಿದ್ದು ವಿರುದ್ಧ ಕಾನೂನು ಸಮರಕ್ಕೆ ಸಿದ್ಧವಾದ ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಸಮರಕ್ಕೆ ಪ್ರತಿಪಕ್ಷ ಬಿಜೆಪಿ ಸಿದ್ಧವಾಗಿದ್ದು, ಅರ್ಕಾವತಿ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಸಮರಕ್ಕೆ ಪ್ರತಿಪಕ್ಷ ಬಿಜೆಪಿ ಸಿದ್ಧವಾಗಿದ್ದು, ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಸಿಎಂ ವಿರುದ್ಧ ಕೇಸ್ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ.

ಈ ಸಂಬಂಧ ಇಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಸಿಎಂ ವಿರುದ್ಧ ಕಾನೂನು ಸಮರ ನಡೆಸುವ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು ಮತ್ತು ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಸತ್ಯ ಶೋಧನಾ ಸಮಿತಿ ಸದಸ್ಯ ವಿ.ಸೋಮಣ್ಣ ಹಾಗೂ ಹಿರಿಯ ವಕೀಲರು ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಸಹ ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಪಾಲರ ಅನುಮತಿ ಪಡೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕೇಸ್ ದಾಖಲಿಸಿತ್ತು. ಇದರಿಂದ ಯಡಿಯೂರಪ್ಪ ರಾಜಿನಾಮೆ ನೀಡಬೇಕಾಗಿ ಬಂದಿತ್ತು. ಈಗ ಅದೇ ತಂತ್ರವನ್ನು ಬಿಜೆಪಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಯೋಗಿಸುತ್ತಿದೆ.

ಶೀಘ್ರದಲ್ಲೇ ಸಿಎಂ ವಿರುದ್ಧ ಮೊಕದ್ದಮೆ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸಲು ಬಿಜೆಪಿ ನಿರ್ಧರಿಸಿದ್ದು, ಈ ಸಂಬಂಧ ಪಕ್ಷದ ಹೈಕಮಾಂಡ್‌ನಿಂದಲೂ ಅನುಮತಿ ಪಡೆದಿರುವುದಾಗಿ ನಿನ್ನೆ ಕನ್ನಡಪ್ರಭ.ಕಾಮ್‌ಗೆ ನೀಡಿದ ಸಂದರ್ಶನದಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದರು.

ಒಂದು ವೇಳೆ ರಾಜ್ಯಪಾಲರು ಪ್ರಕರಣ ದಾಖಲಿಸಲು ಅನುಮತಿ ನೀಡದಿದ್ದರೆ ಪಕ್ಷಕ್ಕೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ
ಬಿಜೆಪಿ, ಕೇಂದ್ರ ನಾಯಕರ ಅನುಮತಿ ಪಡೆದಿದ್ದು, ಈಗ ರಾಜಭವನದ ಅನುಮತಿ ಪಡೆಯಲು ಮುಂದಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮವಾಗಿ ಡಿನೋಟಿಫಿಕೇಶ್ ಮಾಡಿದ್ದಾರೆ ಎಂದು ಕಳೆದ ವಿಧಾನಸಭಾ ಅಧಿವೇಶನದ ವೇಳೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಸತ್ಯ ಶೋಧನಾ ಸಮಿತಿ ಮಧ್ಯಂತರ ವರದಿ ಬಿಡುಗಡೆ ಮಾಡಿದ್ದು, ವರದಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ 'ರೀ ಡು' ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹೈಕೋರ್ಟ್ ಮಾರ್ಗದರ್ಶನದಂತೆ ಕೇವಲ 140 ಎಕರೆ ಡಿನೋಟಿಫೈಗೆ ಅವಕಾಶವಿತ್ತು. ಆದರೆ ಸುಪ್ರೀಂ ಹಾಗೂ ಹೈಕೋರ್ಟ್ ಆದೇಶ ಉಲ್ಲಂಘಿಸಿ 707 ಎಕರೆಗಳನ್ನು 'ರೀ ಡು' ಮಾಡಲಾಗಿದೆ ಎಂದು ದೂರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT