ಅಜಯ್ ಮಾಕೆನ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಅರವಿಂದ್ ಕೇಜ್ರಿವಾಲ್ ಜನರನ್ನು ದಾರಿತಪ್ಪಿಸುತ್ತಿದ್ದಾರೆ: ಕಾಂಗ್ರೆಸ್

ಯಾವುದೇ ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವುದಿಲ್ಲ, ಅಥವಾ ಕೆಂಪು ದೀಪದ ...

ನವದೆಹಲಿ: ಯಾವುದೇ ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವುದಿಲ್ಲ, ಅಥವಾ ಕೆಂಪು ದೀಪದ ವಾಹನಗಳಲ್ಲಿ ಚಲಿಸುವುದಿಲ್ಲ ಎಂದಿದ್ದ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದ ನಂತರ ಹೇಳಿದಕ್ಕೆ ವಿರುದ್ಧವಾಗಿ ನಡೆದುಕೊಂಡರು ಎಂದು ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಅಧ್ಯಕ್ಷರ ವಿರುದ್ಧ ಹರಿಹಾಯ್ದಿದೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿಸಲಾಗುತ್ತಿರುವ ಅಜಯ್ ಮಾಕೆನ್, ಅಧಿಕಾರಕ್ಕೆ ಬಂದರೆ ಸಾಮಾನ್ಯ ನಾಗರಿಕನ ತರಹ ಬದುಕುತ್ತೇನೆ ಎಂದು ವಚನ ನೀಡಿದ್ದ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತೇಬಿಟ್ಟರು. ಸರ್ಕಾರಿ ಕಾರಿನ ವಿಷಯವಾಗಲಿ, ಕೆಂಪು ದೀಪವಿರುವ ಕಾರುಗಳಲ್ಲಿ ಚಲಿಸುವುದಾಗಲಿ ಅಥವಾ ತನ್ನ ಸರ್ಕಾರಿ ರಕ್ಷಣೆಯನ್ನು ತೆಗೆದುಕೊಳ್ಳುವ ವಿಷಯದಲ್ಲೂ ಕೇಜ್ರಿವಾಲ್ ತಮ್ಮ ವಚನ ಮುರಿದರು ಎಂದು ದೂರಿದ್ದರೆ.

ಮುಖ್ಯಮಂತ್ರಿ ಆದಮೇಲೆ ಕೇಜ್ರಿವಾಲ್ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದರು ಎಂಬುದಕ್ಕೆ ಅಧಿಕೃತ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಅಜಯ್ ಮಾಕೆನ, ಆಪ್ ಪಕ್ಷದ ೪೯ ದಿನಗಳ ದುರಾಡಳಿತವನ್ನು ಜನರಿಗೆ ತಿಳಿಸಲು ಕಿರು ಪುಸ್ತಕವೊಂದನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ