ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನಕ್ಸಲ್ ಹಿಂಸೆ: ಸಾರ್ವಜನಿಕರ ಎದುರು ಇಬ್ಬರ ಹತ್ಯೆ

ಮಾವೋವಾದಿಗಳು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ 'ಜನ ಅದಾಲತ್'

ರಾಯಪುರ: ಮಾವೋವಾದಿಗಳು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ 'ಜನ ಅದಾಲತ್' (ಜನರ ನ್ಯಾಯಾಲಯ) ಅವರನ್ನು ಕೊಂದಿರುವ ಘಟನೆ ಚತ್ತೀಸ್ ಘರ್ ನ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮಲಾಲ್ ಮತ್ತು ಮಂತರ್ ಕ್ರಮವಾಗಿ ಆತ್ಪಾಲ್ ಮತ್ತು ಬೈಳಪಾದ್ ಗ್ರಾಮಗಳ ನಿವಾಸಿಗಳು ಬಂಡುಕೋರರಿಂದ ಹತ್ಯೆಗೊಳಗಾಗಿದ್ದಾರೆ. ಬೆನೂರ್ ಪೋಲೀಸ್ ಠಾಣೆ ವ್ಯಾಪ್ತಿಗೆ ಬರುವ ಈ ಗ್ರಾಮಸ್ಥರನ್ನು ಪೊಲೀಸ್ ಮಾಹಿತಿದಾರರು ಎಂದು ದೂರಿ ಕೊಲ್ಲಲಾಗಿದೆ ಎಂದು ನಾರಾಯಣಪುರ ಎಸ್ ಪಿ ತುಕಾರಾಂ ಕಾಂಬ್ಲೆ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಗಳ ಪ್ರಕಾರ ಜನವರಿ ೧೪ ರಂದು ನಕ್ಸಲರು ಇವರಿಬ್ಬರನ್ನೂ ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಇವರನ್ನು 'ಜನ ಅದಾಲತ್' ನ್ಯಾಯಾಲಯದಲ್ಲಿ ಶನಿವಾರ ತಪ್ಪಿತಸ್ಥರೆಂದು ಪರಿಗಣಿಸಿ ಅವರನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿಗಳನ್ನು ಬಂದಿಸಲು ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT