ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನಕ್ಸಲ್ ಹಿಂಸೆ: ಸಾರ್ವಜನಿಕರ ಎದುರು ಇಬ್ಬರ ಹತ್ಯೆ

ಮಾವೋವಾದಿಗಳು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ 'ಜನ ಅದಾಲತ್'

ರಾಯಪುರ: ಮಾವೋವಾದಿಗಳು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ 'ಜನ ಅದಾಲತ್' (ಜನರ ನ್ಯಾಯಾಲಯ) ಅವರನ್ನು ಕೊಂದಿರುವ ಘಟನೆ ಚತ್ತೀಸ್ ಘರ್ ನ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮಲಾಲ್ ಮತ್ತು ಮಂತರ್ ಕ್ರಮವಾಗಿ ಆತ್ಪಾಲ್ ಮತ್ತು ಬೈಳಪಾದ್ ಗ್ರಾಮಗಳ ನಿವಾಸಿಗಳು ಬಂಡುಕೋರರಿಂದ ಹತ್ಯೆಗೊಳಗಾಗಿದ್ದಾರೆ. ಬೆನೂರ್ ಪೋಲೀಸ್ ಠಾಣೆ ವ್ಯಾಪ್ತಿಗೆ ಬರುವ ಈ ಗ್ರಾಮಸ್ಥರನ್ನು ಪೊಲೀಸ್ ಮಾಹಿತಿದಾರರು ಎಂದು ದೂರಿ ಕೊಲ್ಲಲಾಗಿದೆ ಎಂದು ನಾರಾಯಣಪುರ ಎಸ್ ಪಿ ತುಕಾರಾಂ ಕಾಂಬ್ಲೆ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಗಳ ಪ್ರಕಾರ ಜನವರಿ ೧೪ ರಂದು ನಕ್ಸಲರು ಇವರಿಬ್ಬರನ್ನೂ ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಇವರನ್ನು 'ಜನ ಅದಾಲತ್' ನ್ಯಾಯಾಲಯದಲ್ಲಿ ಶನಿವಾರ ತಪ್ಪಿತಸ್ಥರೆಂದು ಪರಿಗಣಿಸಿ ಅವರನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿಗಳನ್ನು ಬಂದಿಸಲು ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

SCROLL FOR NEXT