ಹಂಸರಾಜ್ ಭಾರದ್ವಾಜ್ 
ಪ್ರಧಾನ ಸುದ್ದಿ

ದುರ್ಬಲ ಕಾಂಗ್ರೆಸ್‌ನಿಂದ ಮೋದಿ ತಡೆಯಲು ಸಾಧ್ಯವಿಲ್ಲ: ಭಾರದ್ವಾಜ್

ದುರ್ಬಲ ಕಾಂಗ್ರೆಸ್‌ನಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕದ ಮಾಜಿ ರಾಜ್ಯಪಾಲ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ...

ನವದೆಹಲಿ: ದುರ್ಬಲ ಕಾಂಗ್ರೆಸ್‌ನಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕದ ಮಾಜಿ ರಾಜ್ಯಪಾಲ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹಂಸರಾಜ್ ಭಾರದ್ವಾಜ್ ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ದುರ್ಬಲವಾದ ಈ ಪರಿಸ್ಥಿತಿಯಲ್ಲಿ ಮೋದಿ ಜನಪ್ರಿಯತೆಯನ್ನು ತಡೆದು ನಿಲ್ಲಿಸುವ ಶಕ್ತಿ ಇಲ್ಲ. ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಗಾಂಧಿ ಕೂಡ ಔಟ್ ಆಫ್ ಟಚ್ ಆಗಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಭಾರದ್ವಾಜ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ್ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ವಿರುದ್ಧ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕ್ಕೆ ಸಂಸತ್ ಅಧಿವೇಶನ ನಡೆಸಲು ಬಿಡಲ್ಲ ಎಂಬ ಕಾಂಗ್ರೆಸ್ ಪಕ್ಷದ ಬೆದರಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಭಾರದ್ವಾಜ್, ಇದು ಉತ್ತಮ ನಿರ್ಧಾರ ಅಂತ ಅನ್ನಿಸುವುದಿಲ್ಲ. ಯಾರೇ ಯಾವುದೇ ಕಾನೂನನ್ನು ಉಲ್ಲಂಘಿಸಿದರು, ಅದಕ್ಕೆ ಕಾನೂನಿದೆ. ಅದನ್ನು ಅನುಸರಿಸಬೇಕು. ಆದರೆ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುತ್ತೇವೆ ಎಂಬುದು ಒಳ್ಳೆಯ ಸಂಸದೀಯ ನಡವಳಿಕೆ ಅಲ್ಲ ಎಂದಿದ್ದಾರೆ.

ಪ್ರಮುಖ ವಿಷಯಗಳನ್ನು ಚರ್ಚಿಸಲು ಸಂಸತ್ ಉತ್ತಮವಾದ ಸ್ಥಳ. ಅಲ್ಲಿ ಮೋದಿ, ಸ್ವರಾಜ್, ರಾಜೇ ಬಗ್ಗೆಯೂ ಚರ್ಚಿಸಬೇಕು. ಈ ವಿಷಯವನ್ನು ಸಂಸತ್ ನಲ್ಲಿ ಚರ್ಚಿಸುವ ಮೂಲಕ ಕಾಂಗ್ರೆಸ್ ತನ್ನ ಬೌದ್ಧಿಕ ಚಾತುರ್ಯವನ್ನು ಪ್ರದರ್ಶಿಸಬೇಕು ಎಂದು ಭಾರದ್ವಾಜ್ ಸಲಹೆ ನೀಡಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಮೋದಿ ವಿರುದ್ಧ ಹೋರಾಡುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷಕ್ಕೆ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿ ಅವರು, ದುರ್ಬಲವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಪವರ್ ಫುಲ್ ಪ್ರಚಾರಕಾರ್ಯ ನಡೆಸುತ್ತಿರುವ ಮೋದಿಯನ್ನು ಹಣಿಯಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!