ಬಿಬಿಎಂಪಿ 
ಪ್ರಧಾನ ಸುದ್ದಿ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಮರುಜೀವ?

ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಬಿಎಂಪಿ...

ಬೆಳಗಾವಿ/ಸುವರ್ಣ ವಿಧಾನಸೌಧ: ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಬಿಎಂಪಿ ವಿಭಜನೆಗಾಗಿ ಪ್ರತ್ಯೇಕ ವಿಧೇಯಕ ಜಾರಿಗೆ ಮುಂದಾಗಿದೆ.

ಎಲ್ಲವೂ ಸರ್ಕಾರ ಅಂದುಕೊಂಡಂತೆ ನಡೆದರೆ ಈ ಅಧಿವೇಶನ ಸಂದರ್ಭದಲ್ಲೇ ಬಿಬಿಎಂಪಿ ಪುನಾರಚನೆ ವಿಧೇಯಕವನ್ನು ಸದನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ನೀಡಿರುವ ಅವಧಿಯೊಳಗೆ ಬೆಂಗಳೂರು ವಿಭಜನೆಗಾಗಿ ಸರ್ಕಾರ ರಚಿಸಿರುವ ಬಿ.ಎಸ್.ಪಾಟೀಲ್ ಸಮಿತಿ ಮತ್ತು ವಿಧಾನ ಪರಿಷತ್ ಆಯ್ಕೆ ಸಮಿತಿ ವರದಿ ಆಧರಿಸಿ ಬಿಬಿಎಂಪಿಯನ್ನು ವಿಭಜನೆ ಮಾಡುವ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ. ಈ ಎರಡು ಸಮಿತಿ ತನ್ನ ವರದಿಯನ್ನು ಬಹುಪಾಲು ಅಂತಿಮಗೊಳಿವೆ.

ಬೆಂಗಳೂರು ಅಂತಾರಾಷ್ಟ್ರೀಯ ಮನ್ನಣೆ ಪಡೆದ ನಗರವಾದರೂ, ಅದರ ಆಡಳಿತ ನಿರ್ವಹಣೆಗೆ ಪ್ರತ್ಯೇಕ ಕಾನೂನು ಇಲ್ಲ. ಮುನ್ಸಿಪಲ್ ಕಾಯ್ದೆ ಪ್ರಕರಾವೇ ಆಡಳಿತ ನಡೆಸಲಾಗುತ್ತಿದೆ. ಬೆಂಗಳೂರು ಆಡಳಿತ ನಿರ್ವಹಣೆಗೆ ಪ್ರತ್ಯೇಕ ಕಾಯ್ದೆ ಅಗತ್ಯ ಇರುವುದರಿಂದ ಸರ್ಕಾರ ವಿಧೇಯಕ ರಚನೆಗೆ ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ