ಬಿಬಿಎಂಪಿ 
ಪ್ರಧಾನ ಸುದ್ದಿ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಮರುಜೀವ?

ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಬಿಎಂಪಿ...

ಬೆಳಗಾವಿ/ಸುವರ್ಣ ವಿಧಾನಸೌಧ: ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಬಿಎಂಪಿ ವಿಭಜನೆಗಾಗಿ ಪ್ರತ್ಯೇಕ ವಿಧೇಯಕ ಜಾರಿಗೆ ಮುಂದಾಗಿದೆ.

ಎಲ್ಲವೂ ಸರ್ಕಾರ ಅಂದುಕೊಂಡಂತೆ ನಡೆದರೆ ಈ ಅಧಿವೇಶನ ಸಂದರ್ಭದಲ್ಲೇ ಬಿಬಿಎಂಪಿ ಪುನಾರಚನೆ ವಿಧೇಯಕವನ್ನು ಸದನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ನೀಡಿರುವ ಅವಧಿಯೊಳಗೆ ಬೆಂಗಳೂರು ವಿಭಜನೆಗಾಗಿ ಸರ್ಕಾರ ರಚಿಸಿರುವ ಬಿ.ಎಸ್.ಪಾಟೀಲ್ ಸಮಿತಿ ಮತ್ತು ವಿಧಾನ ಪರಿಷತ್ ಆಯ್ಕೆ ಸಮಿತಿ ವರದಿ ಆಧರಿಸಿ ಬಿಬಿಎಂಪಿಯನ್ನು ವಿಭಜನೆ ಮಾಡುವ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ. ಈ ಎರಡು ಸಮಿತಿ ತನ್ನ ವರದಿಯನ್ನು ಬಹುಪಾಲು ಅಂತಿಮಗೊಳಿವೆ.

ಬೆಂಗಳೂರು ಅಂತಾರಾಷ್ಟ್ರೀಯ ಮನ್ನಣೆ ಪಡೆದ ನಗರವಾದರೂ, ಅದರ ಆಡಳಿತ ನಿರ್ವಹಣೆಗೆ ಪ್ರತ್ಯೇಕ ಕಾನೂನು ಇಲ್ಲ. ಮುನ್ಸಿಪಲ್ ಕಾಯ್ದೆ ಪ್ರಕರಾವೇ ಆಡಳಿತ ನಡೆಸಲಾಗುತ್ತಿದೆ. ಬೆಂಗಳೂರು ಆಡಳಿತ ನಿರ್ವಹಣೆಗೆ ಪ್ರತ್ಯೇಕ ಕಾಯ್ದೆ ಅಗತ್ಯ ಇರುವುದರಿಂದ ಸರ್ಕಾರ ವಿಧೇಯಕ ರಚನೆಗೆ ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT