ವಜುಭಾಯ್ ವಾಲಾ 
ಪ್ರಧಾನ ಸುದ್ದಿ

'ಲೋಕಾ' ಭ್ರಷ್ಟಾಚಾರ: ವರದಿ ಕೇಳಿದ ರಾಜ್ಯಪಾಲರು

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ರಾಜ್ಯಪಾಲ ವಜುಭಾಯ್ ವಾಲಾ ಅವರು...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

ಇಂದು ದೂರವಾಣಿ ಮೂಲಕ ಮೂಲಕ ಸರ್ಕಾರದಿಂದ ಮಾಹಿತಿ ಪಡೆದಿರುವ ರಾಜ್ಯಪಾಲರು, ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಮತ್ತೊಂದೆಡೆ ಲೋಕಾಯುಕ್ತರ ಪದಚ್ಯುತಿ ವಿಚಾರ ನಮಗೆ ಸಂಬಂಧಿಸಿದ್ದಲ್ಲ, ಅದು ರಾಜ್ಯಪಾಲರಿಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ, ವಜುಭಾಯ್ ವಾಲಾ ಅವರು ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಏತನ್ಮಧ್ಯೆ ಲೋಕಾಯುಕ್ತ ನ್ಯಾ.ವೈ ಭಾಸ್ಕರ್ ರಾವ್ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಈ ವೇಳೆ ಲೋಕಾಯುಕ್ತ ವಿಚಾರದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT