ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ವಾಹನ ಸವಾರರೆ ಎಚ್ಚರ... ಇನ್ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದ್ರೆ ಜೈಲು ಗ್ಯಾರಂಟಿ!

ವಾಹನ ಸವಾರರೇ ಎಚ್ಚರ... ಇನ್ನು ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆ ಗ್ಯಾರಂಟಿ. ಹೌದು ಸಾರ್ವಜನಿಕ...

ಬೆಂಗಳೂರು: ವಾಹನ ಸವಾರರೇ ಎಚ್ಚರ... ಇನ್ನು ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆ ಗ್ಯಾರಂಟಿ. ಹೌದು ಸಾರ್ವಜನಿಕ ರಸ್ತೆಯಲ್ಲೇ ನಿಂತು ಜಗಳ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬೆಂಗಳೂರು ಸಂಚಾರಿ ಪೊಲೀಸರು ಮುಂದಾಗಿದ್ದಾರೆ.

ರಸ್ತೆಯಲ್ಲಿ ಜಗಳ ಮಾಡುವವರ ವಿರುದ್ಧ ಐಪಿಸಿ ಸೆಕ್ಷನ್ 160ರ ಅಡಿ ಕೇಸ್ ದಾಖಲಿಸಲು ಅಥವಾ ದಂಡ ವಿಧಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಸಣ್ಣಪುಟ್ಟ ವಿಷಯಗಳಿಗೂ ಸಹ ಸವಾರರೊಂದಿಗೆ ಪರಸ್ಪರ ವಾಗ್ವಾದಕ್ಕೀಳಿದು ಬೇರೆಯವರಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಎಂ.ಸಲೀಂ ಅವರು ಹೇಳಿದ್ದಾರೆ.

ಇತ್ತೀಚಿಗೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿನ ಕಾದಾಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!