ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ವಾಹನ ಸವಾರರೆ ಎಚ್ಚರ... ಇನ್ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದ್ರೆ ಜೈಲು ಗ್ಯಾರಂಟಿ!

ವಾಹನ ಸವಾರರೇ ಎಚ್ಚರ... ಇನ್ನು ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆ ಗ್ಯಾರಂಟಿ. ಹೌದು ಸಾರ್ವಜನಿಕ...

ಬೆಂಗಳೂರು: ವಾಹನ ಸವಾರರೇ ಎಚ್ಚರ... ಇನ್ನು ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆ ಗ್ಯಾರಂಟಿ. ಹೌದು ಸಾರ್ವಜನಿಕ ರಸ್ತೆಯಲ್ಲೇ ನಿಂತು ಜಗಳ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬೆಂಗಳೂರು ಸಂಚಾರಿ ಪೊಲೀಸರು ಮುಂದಾಗಿದ್ದಾರೆ.

ರಸ್ತೆಯಲ್ಲಿ ಜಗಳ ಮಾಡುವವರ ವಿರುದ್ಧ ಐಪಿಸಿ ಸೆಕ್ಷನ್ 160ರ ಅಡಿ ಕೇಸ್ ದಾಖಲಿಸಲು ಅಥವಾ ದಂಡ ವಿಧಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಸಣ್ಣಪುಟ್ಟ ವಿಷಯಗಳಿಗೂ ಸಹ ಸವಾರರೊಂದಿಗೆ ಪರಸ್ಪರ ವಾಗ್ವಾದಕ್ಕೀಳಿದು ಬೇರೆಯವರಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಎಂ.ಸಲೀಂ ಅವರು ಹೇಳಿದ್ದಾರೆ.

ಇತ್ತೀಚಿಗೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿನ ಕಾದಾಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT