ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಾಜ್ಯ ಸರ್ಕಾರದ ವೆಬ್‌ಸೈಟ್‌ನಲ್ಲಿ ನಿಮ್ಮ ಜಾತಿ, ಧರ್ಮ ಬಹಿರಂಗ

ಇನ್ನುಮುಂದೆ ನಿಮ್ಮ ಜಾತಿ, ಧರ್ಮ ಹಾಗೂ ಮೀಸಲಾತಿಯಡಿ ನೀವು ಸರ್ಕಾರದಿಂದ ಪಡೆಯು ಸೌಲಭ್ಯಗಳು ರಹಸ್ಯವಾಗಿ ಉಳಿಯುವುದಿಲ್ಲ.

ಬೆಂಗಳೂರು: ಇನ್ನುಮುಂದೆ ನಿಮ್ಮ ಜಾತಿ, ಧರ್ಮ ಹಾಗೂ ಮೀಸಲಾತಿಯಡಿ ನೀವು ಸರ್ಕಾರದಿಂದ ಪಡೆಯು ಸೌಲಭ್ಯಗಳು ರಹಸ್ಯವಾಗಿ ಉಳಿಯುವುದಿಲ್ಲ.

ಹೌದು, ರಾಜ್ಯ ಸರ್ಕಾರ ಇತ್ತೀಚಿಗೆ ನಡೆಸಿದ ಜಾತಿ ಸಮೀಕ್ಷೆಯಲ್ಲಿ ಸಂಗ್ರಹಿಸಿದ ನಿಮ್ಮ ಜಾತಿ, ಉಪ ಜಾತಿ, ಪಂಗಡ, ವರ್ಗ ಹಾಗೂ ಧರ್ಮ ಸೇರಿದಂತೆ ಇತರೆ ವಿವರಗಳು ಈಗ ರಹಸ್ಯವಾಗಿ ಉಳಿದಿಲ್ಲ.

ಸಮೀಕ್ಷೆ ವೇಳೆ ನೀವು ನೀಡಿದ ನಿಮ್ಮ ಸಾಮಾಜಿಕ, ಆರ್ಥಿಕ ಹಾಗೂ ಕುಟುಂಬಕ್ಕೆ ಸಂಬಂಧಿಸಿದ 21 ಬಗೆಯ ವಿವರಗಳು ಈಗ ರಾಜ್ಯ ಸರ್ಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಆಂಗ್ಲ ಮಾಧ್ಯವೊಂದು ವರದಿ ಮಾಡಿದೆ.

ಎರಡು ತಿಂಗಳ ಹಿಂದಷ್ಟೇ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿದ್ದ ಸಾಮಾಜಿಕ - ಆರ್ಥಿಕ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಇನ್ನಷ್ಟೇ ಸಲ್ಲಿಸಬೇಕಾಗಿದೆ. ಹಾಗಿದ್ದರೂ ಈ ಸಮೀಕ್ಷೆಯಡಿ ಸಂಗ್ರಹಿಸಲಾದ ವಿವಾದಾತ್ಮಕ ಜನಗಣತಿಯ ವಿವರಗಳು ಈಗ ಸಾರ್ವಜನಿಕರಿಗೆ ಮುಕ್ತವಾಗಿ ಸಿಗುವಂತೆ ಸರ್ಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಜಾತಿ ಗಣತಿಯ ಸಂದರ್ಭದಲ್ಲಿ 21 ಬಗೆಯ ವಿವರಗಳನ್ನು ಸಂಗ್ರಹಿಸಲಾಗಿತ್ತು. ವ್ಯಕ್ತಿಯ ಜಾತಿ ಸಹಿತವಾಗಿ ಆ ವಿವರಗಳನ್ನು ಈಗ ಸರಕಾರದ ವೆಬ್‌ ಸೈಟಿಗೆ ಹಾಕಲಾಗಿದೆ. ಯಾವನೇ ಒಬ್ಬ ವ್ಯಕ್ತಿ ತನ್ನ ಜಾತಿ, ಸಮುದಾಯಕ್ಕೆ ಮೀಸಲಿರುವ ಸೌಕರ್ಯ - ಸೌಲಭ್ಯಗಳನ್ನು ಸರಕಾರದಿಂದ ಪಡೆಯುವುದಾದರೆ ಅದನ್ನು ಎಲ್ಲರಿಗೂ ತಿಳಿಯುವಂತೆ ಬಹಿರಂಗಪಡಿಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಬಗ್ಗೆ ನಾವು ಕೇವಲ ಸರಕಾರದ ಸೂಚನೆಗಳನ್ನು ಮಾತ್ರವೇ ಅನುಸರಿಸುತ್ತಿದ್ದೇವೆ' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT