ಮಂಡ್ಯ ಜಿಲ್ಲೆಯಲ್ಲಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ ರೈತ ಮಹಿಳೆಯರು 
ಪ್ರಧಾನ ಸುದ್ದಿ

37 ದಿನಗಳಲ್ಲಿ 38 ರೈತರ ಸಾವು; ಲೇವಾದೇವಿಗಾರರ ಮೇಲೆ ಸರ್ಕಾರದ ಕೆಂಗಣ್ಣು

ಲೇವಾದೇವಿಗಾರರ ಬಳಿ ಸಾಲ ಪಡೆದು ಒತ್ತಡದಿಂದ ಕರ್ನಾಟಕದಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲಿಯೇ, ಕರ್ನಾಟಕ ಸರ್ಕಾರ ಎಲ್ಲ ಜಿಲ್ಲೆಗಳಲ್ಲೂ

ಬೆಳಗಾವಿ: ಲೇವಾದೇವಿಗಾರರ ಬಳಿ ಸಾಲ ಪಡೆದು ಒತ್ತಡದಿಂದ ಕರ್ನಾಟಕದಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲಿಯೇ, ಕರ್ನಾಟಕ ಸರ್ಕಾರ ಎಲ್ಲ ಜಿಲ್ಲೆಗಳಲ್ಲೂ ಇಂತಹ ಪ್ರಕರಣಗಳ ವಿಚಾರಣೆಗೆ ಚೌಕಿಗಳನ್ನು ತೆರೆದು ಕರ್ನಾಟಕ ಲೇವಾದೇವಿಗಾರ ಕಾಯ್ದೆ ೧೯೬೧ ಕ್ಕೆ ತಿದ್ದುಪಡಿ ತರುವ ನಿರ್ಧಾರ ಮಾಡಿದೆ.

ರೈತರ ರಕ್ತ ಹೀರುತ್ತಿರುವ ಲೇವಾದೇವಿಗಾರರಿಗೆ ಕಡಿವಾಣ ಹಾಕಲು ಹೆಚ್ಚಿನ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸಹಕಾರ ಸಚಿವ ಎಚ್ ಎಸ್ ಮಹವೇವ ಪ್ರಸಾದ್ ತಿಳಿಸಿದ್ದಾರೆ.

ಲೇವಾದೇವಿಗಾರಾರು ಅತಿ ಹೆಚ್ಚು ಬಡ್ಡಿ ದರವನ್ನು ರೈತರ ಮೇಲೆ ಹೇರುತ್ತಿರುವುದನ್ನು ನಿಯಂತ್ರಣಗೊಳಿಸಲು ಕಾನೂನಿಗೆ ತಿದ್ದುಪಡಿ ತರುವುದಾಗಿ ಕಾನೂನು ಸಚಿವ ಟಿ ಬಿ ಜಯಚಂದ್ರ ತಿಳಿಸಿದ್ದಾರೆ.

ಒಂದೇ ದಿನದಲ್ಲಿ ಏಳು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದರ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಎಲ್ಲ ರೈತರ ಕುಟುಂಬಗಳನ್ನು ಸಹಕಾರ ಸಂಘಗಳ ಸದುಪಯೋಗ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಮಧ್ಯೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳನ್ನು ಭೇಟಿ ಮಾಡಿ ಪರಿಹಾರ ನೀಡುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT