ಪಾಕ್ ಪ್ರಧಾನಿ ನವಾಜ್ ಷರೀಫ್- ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಬಾಂಧವ್ಯ ವೃದ್ಧಿಗೆ ಉಗ್ರ ಲಖ್ವಿ ವಿರುದ್ಧ ಕ್ರಮ ಅಗತ್ಯ: ನವಾಜ್ ಷರೀಫ್ ಗೆ ಪ್ರಧಾನಿ ಖಡಕ್ ಸಂದೇಶ

ರಷ್ಯಾದ ಉಫಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಉಫಾ : ರಷ್ಯಾದ ಉಫಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ನಿಗದಿಯಾಗಿದ್ದ ಸಮಯವನ್ನು ಮೀರಿ ಒಟ್ಟು ಒಂದು ಗಂಟೆಗೂ ಅಧಿಕ ಕಾಲ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಎಸ್ ಸಿ ಒ ಶೃಂಗಸಭೆ ಸಂದರ್ಭದಲ್ಲಿ ನಡೆದ ಮಾತುಕತೆಯಲ್ಲಿ ಭಯೋತ್ಪಾದನೆ ವಿಷಯ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಖಡಕ್ ಪ್ರಶ್ನೆಗಳನ್ನು ಕೇಳಿದ್ದು, ಪಾಕಿಸ್ತಾನ ನಡೆದುಕೊಳ್ಳುತ್ತಿರುವ ರೀತಿಗೆ ಅಸಮಾಧಾನ ವ್ಯಕಪಡಿಸಿದ್ದಾರೆ. ಮುಂಬೈ ದಾಳಿ ಪ್ರಕರಣದಲ್ಲಿ ಪಾಕಿಸ್ತಾನದ ಮೃದು ಧೋರಣೆಗೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರಧಾನಿ, 26 /11 ರ ಮುಂಬೈ ದಾಳಿಯ ರೂವಾರಿ ಲಖ್ವಿ ವಿರುದ್ಧ ಪಾಕಿಸ್ತಾನದ ಮುಂದಿನ ಕ್ರಮ ಏನು ಎಂದು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಸೈನಿಕರು ಪದೇ ಪದೇ ಗಡಿ ನಿಯಮ ಉಲ್ಲಂಘನೆ ಮಾಡುತ್ತಿರುವುದು ಹಾಗೂ ಭಯೋತ್ಪಾದಕರು ಭಾರತದೊಳಗೆ ನುಸುಳುತ್ತಿರುವುದನ್ನು ಪಾಕ್ ಸರ್ಕಾರ ಗಮನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಈ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ಮೋದಿ ನವಾಜ್ ಷರೀಫ್ ಅವರನ್ನು ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ಅವರ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿರುವ ನವಾಜ್ ಷರೀಫ್ ಮುಂಬೈ ದಾಳಿ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ಮೋದಿ ಪ್ರಸ್ತಾಪಿಸಿರುವ ಎಲ್ಲಾ ವಿಷಯಗಳ ಬಗ್ಗೆ ಸೂಕ್ತ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪಾಕಿಸ್ತಾನ ಹಾಗೂ ಭಾರತ ವಿದೇಶಾಂಗ ಕಾರ್ಯದರ್ಶಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ನವಾಜ್ ಷರೀಫ್ ಮೋದಿಗೆ ಆಹ್ವಾನ ನೀಡಿದ್ದು ಮೋದಿ 2016 ರಲ್ಲಿ ಇಸ್ಲಾಮಾಬಾದ್ ನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದ್ದಾರೆ ಎಂದು ಉಭಯ ದೇಶದ ವಿದೇಶಾಂಗ ಕಾರ್ಯದರ್ಶಿಗಳು ಸ್ಪಷ್ಟಪಡಿಸಿದ್ದಾರೆ.

ಮಾತುಕತೆ ವೇಳೆ, 15 ದಿನಗಳಲ್ಲಿ ಉಭಯ ದೇಶದ ಮೀನುಗಾರರನ್ನು ಬಿಡುಗಡೆ ಮಾಡುವುದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಧಾರ್ಮಿಕ ಪ್ರವಾಸೋದ್ಯಮಕ್ಕೆ ಉಭಯ ದೇಶಗಳಲ್ಲೂ ಸೌಲಭ್ಯ ಒದಗಿಸುವುದರ ಬಗ್ಗೆ ಚರ್ಚೆ ನಡೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT