ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ 
ಪ್ರಧಾನ ಸುದ್ದಿ

ರಾಹುಲ್ ಅಲ್ಪಾವಧಿ ರಾಜಕಾರಣಿ: ನಕ್ವಿ

ರಾಜಧಾನಿ ದೆಹಲಿಯಲ್ಲಿ ರಸ್ತೆ ಬದಿ ವ್ಯಾಪಾರಿಗಳನ್ನು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಿಕೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ರಸ್ತೆ ಬದಿ ವ್ಯಾಪಾರಿಗಳನ್ನು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಿಕೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ, ಇದು 'ಅಲ್ಪಾವಧಿ ರಾಜಕಾರಣಿ'ಯಿಂದ 'ಅಲ್ಪಾವಧಿ ರಾಜಕೀಯ ನಾಟಕ' ಎಂದು ಟೀಕಿಸಿದ್ದಾರೆ.

"ಇದು 'ಅಲ್ಪಾವಧಿ ರಾಜಕಾರಣಿ'ಯಿಂದ 'ಅಲ್ಪಾವಧಿ ರಾಜಕೀಯ ನಾಟಕ'. ಇದು ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ನಡೆಸಿರುವ ಚಟುವಟಿಕೆಯಲ್ಲ. ನಾವು ಭಾರತೀಯ ಜನತಾ ಪಕ್ಷ ರಸ್ತೆ ಬದಿ ವ್ಯಾಪಾರಿಗಳು ಮತ್ತು ತಳ್ಳು ವ್ಯಾಪಾರಿಗಳ ಖಾಯಂ ಅಭಿವೃದ್ಧಿ ಮತ್ತು ಅಭ್ಯುಧಯಕ್ಕಾಗಿ ನೀತಿಗಳನ್ನು ಮಾಡಿದ್ದೇವೆ. ಅವರ ತೊಂದರೆಗಳನ್ನು ನಿವಾರಿಸಲು ಪ್ರಯತ್ನಿಸಿದ್ದೇವೆ. ಅವರಿಗೆ ಈ ವಿಷಯಗಳು ತಿಳಿದಿಲ್ಲ, ಆದುದರಿಂದ ಅವರದ್ದು ಅಲ್ಪಾವಧಿ ರಾಜಕೀಯ ನಾಟಕ" ಎಂದು ನಕ್ವಿ ಹೇಳಿದ್ದಾರೆ.

ದೆಹಲಿಯ ರಘುಬೀರ್ ನಗರದಲ್ಲಿ ರಸ್ತೆಬದಿಯ ವ್ಯಾಪಾರಿಗಳನ್ನು ಭೇಟಿ ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಡಜನರನ್ನು ದೆಹಲಿಯಲ್ಲಿ ಕಡೆಗಣಿಸಲಾಗಿದೆ ಮತ್ತು ಅವರನ್ನು ಹೊರದಬ್ಬಲಾಗುತ್ತಿದೆ ಎಂದು ಆರೋಪಿಸಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಜಯ್ ಮಾಕೆನ್ ಮತ್ತು ಪಿ ಸಿ ಚ್ಯಾಕೋ ರಾಹುಲ್ ಜೊತೆಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT