ಪುಷ್ಕರ್ ಘಾಟ್ ನಲ್ಲಿ ಪುಣ್ಯ ಸ್ನಾನ ಮಾಡಲು ಉಂಟಾದ ನೂಕುನುಗ್ಗಾಟದಲ್ಲಿ ಸಾವನ್ನಪ್ಪಿದ ಮಹಿಳೆಯರು 
ಪ್ರಧಾನ ಸುದ್ದಿ

ಗೋದಾವರಿ ಪುಷ್ಕರದಲ್ಲಿ ಕಾಲ್ತುಳಿತಕ್ಕೆ 27 ಸಾವು: ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಆಂಧ್ರಪ್ರದೇಶದ ಗೋದಾವರಿ ಪುಷ್ಕರ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ...

ರಾಜಮಂಡ್ರಿ: ಆಂಧ್ರಪ್ರದೇಶದ ಗೋದಾವರಿ ಪುಷ್ಕರ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರವನ್ನು ಆಂಧ್ರಪ್ರದೇಶದ ಸರ್ಕಾರ ಘೋಷಿಸಿದೆ.

ದಕ್ಷಿಣದ ಕುಂಭಮೇಳ ಎಂದು ಕರೆಸಿಕೊಳ್ಳುವ ಗೋದಾವರಿ ಪುಷ್ಕರ ಮೇಳದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ.

144 ವರ್ಷಗಳಿಗೊಮ್ಮೆ ನಡೆಯುವ ಗೋಧಾವರಿ ಮಹಾಪುಷ್ಕರ ಮೇಳ ಇಂದಿನಿಂದ ಆರಂಭವಾಗಿತ್ತು. ಮೊದಲ ದಿನದಿಂದಲೇ ಲಕ್ಷಾಂತರ ಜನ ಆಗಮಿಸಿದ್ದರು. ರಾಜಮಂಡ್ರಿಯ ಪುಷ್ಕರ ಘಾಟ್ ನಲ್ಲಿ ನದಿಯಲ್ಲಿ ಪುಣ್ಯ ಸ್ನಾನ ಮಾಡುವುದಕ್ಕಾಗಿ ಭಕ್ತಾದಿಗಳ ನಡುವೆ ತಳ್ಳಾಟ, ನೂಕುನುಗ್ಗಲಾಟ ಉಂಟಾಗಿತ್ತು. ಈ ವೇಳೆ ಉಂಟಾದ ಕಾಲ್ತುಳಿತಕ್ಕೆ 27 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ನಡೆಯುತ್ತಿದ್ದಂತೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪರಿಹಾರ ಕಾರ್ಯದ ಉಸ್ತುವಾರಿ ವಹಿಸಿಕೊಂಡು, ಕಂಟ್ರೋಲ್ ರೂಮ್ ನಲ್ಲಿ ಬೀಡು ಬಿಟ್ಟಿದ್ದಾರೆ. ಅಲ್ಲದೇ ಪುಷ್ಕರ್ ಮೇಳದಲ್ಲಿ ಸಹಾಯವಾಣಿ ತೆರಯಲಾಗಿದೆ. ಯಾರಿಗೆ ಹೆಚ್ಚಿನ ಮಾಹಿತಿ ಬೇಕೋ ಅವರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತಿದ್ದು, ಜನರನ್ನು ಬೇರೆ ಘಾಟ್ ನತ್ತ ಕಳುಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT