ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಅಡುಗೆ ಸಿಲಿಂಡರ್ ಸ್ಫೋಟ; ಕುಟುಂಬದ ನಾಲ್ಕು ಜನರ ಸಾವು

ಮುಂಬೈನ ಸ್ಲಂ ಪ್ರದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಒಂದು ಸ್ಫೋಟಗೊಂಡು ಕುಟುಂಬದ ನಾಲ್ಕು ಜನ ಮೃತಪಟ್ಟಿದ್ದು, ಮೂವರಿಗೆ ಗಾಯಗೊಂಡ ಘಟನೆ ಗುರುವಾರ

ಮುಂಬೈ: ಮುಂಬೈನ ಸ್ಲಂ ಪ್ರದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಒಂದು ಸ್ಫೋಟಗೊಂಡು ಕುಟುಂಬದ ನಾಲ್ಕು ಜನ ಮೃತಪಟ್ಟಿದ್ದು, ಮೂವರಿಗೆ ಗಾಯಗೊಂಡ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂರ್ವ ಸಾಂತಾಕ್ರೂಜ್ ನ ಮಣಿಲಾಲ್ ನ ಗೋಲಿಬಾರ್ ಸ್ಲಂ ಪ್ರದೇಶದಲ್ಲಿ ಈ ಸ್ಫೋಟ ನಡೆದಿದೆ. ಮನೆಯೊಡತಿ ಸಾಯಿಕುಮಾರಿ ಸುಮಾರು ೧೧ ಘಂಟೆ ಬೆಳಗ್ಗೆ ಸಿಲಿಂಡರ್ ಬದಲಿಸುವ ವೇಳೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ೯೦% ಸುಟ್ಟ ಗಾಯಗೊಳಿಂದಿಗೆ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತಪಟ್ಟವರನ್ನು ರಾಜದೇವ್ ದೀಕ್ಷಿತ್(೫೦), ಕಪಿಲ್ ದೀಕ್ಷಿತ್ (೪೦), ರಾಜೇಂದ್ರ ದೀಕ್ಷಿತ್ (೩೦) ಮತ್ತು ಯಶವಂತ್ ದೀಕ್ಷಿತ್ (೧೮) ಎಂದು ಗುರುತಿಸಲಾಗಿದೆ.

ಗಾಯಗೊಂಡವರು ಸಾಯಿಕುಮಾರಿ ದೀಕ್ಷಿತ್ (೪೦), ಶೋಭಾ ರಾಜೇಂದ್ರ ದೀಕ್ಷಿತ್ (೩೫) ಮತ್ತು ಮೀರಾ ಉಪಾಧ್ಯಾಯ (೪೦)  ಎಂದು ಗುರುತಿಸಲಾಗಿದ್ದು ಅವರುಗಳನ್ನು ವಿ ಎನ್ ದೇಸಾಯಿ ಆಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT