ಹೈಕೋರ್ಟ್ 
ಪ್ರಧಾನ ಸುದ್ದಿ

ಈಗಲಾದರೂ ಕಣ್ತೆರೆದು ನೋಡಿ: ಲೋಕಾ ವಿರುದ್ಧ ಕಿಡಿಕಾರಿದ ಹೈಕೋರ್ಟ್

ಲೋಕಾಯುಕ್ತ ಸಂಸ್ಥೆಯಲ್ಲಿ ಒಳಒಪ್ಪಂದ ವ್ಯವಹಾರಗಳು ನಡೆಯುತ್ತಿದ್ದು, ಸಂಸ್ಥೆಯಲ್ಲಿನ ಲೋಪಗಳು ಬೆಳಕಿಗೆ ಬಂದಿವೆ. ಈಗಲಾದರೂ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಒಳಒಪ್ಪಂದ ವ್ಯವಹಾರಗಳು ನಡೆಯುತ್ತಿದ್ದು, ಸಂಸ್ಥೆಯಲ್ಲಿನ ಲೋಪಗಳು ಬೆಳಕಿಗೆ ಬಂದಿವೆ. ಈಗಲಾದರೂ ಸಂಸ್ಥೆ ಕಣ್ಣು ತೆರೆಯದಿದ್ದರೆ ಹೇಗೆ ಎಂದು ಸಂಸ್ಥೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ 18 ತಿಂಗಳಾದರೂ ತನಿಖೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ. ವಿ.ಎಲ್. ನಂದೀಶ್ ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿದ್ದರು. ಈ ಕುರಿತು ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ವೇಣುಗೋಪಾಲಗೌಡ ಅವರಿದ್ದ ಏಕಸದಸ್ಯ ಪೀಠ, ಲೋಕಾಯುಕ್ತ ಸಂಸ್ಥೆಯಿಂದ ಸಮಾಜಕ್ಕೆ ಒಳ್ಳೆಯದಾಗಬೇಕು. ಅದನ್ನೇ ಸಮಾಜ ಕೂಡ ಬಯಸುತ್ತದೆ. ಈ ಕಾರಣಕ್ಕಾಗಿ ಮೊದಲು ಸಾರ್ವಜನಿಕರಿಗೆ ಪ್ರಾಮಾಣಿಕವಾಗಿರುವಂತೆ ಬದಟಛಿತೆಯನ್ನು ಲೋಕಾ ಸಂಸ್ಥೆ ಪ್ರದರ್ಶಿಸಬೇಕು ಎಂದು ಹೈಕೋರ್ಟ್ `ಲೋಕ'ಕ್ಕೇ ಬೋಧನೆ ಮಾಡಿದೆ.
ಹೈಕೋರ್ಟ್ ಹೇಳಿದ್ದು...

  • ಪ್ರಕರಣ ದಾಖಲಾಗಿ ವರ್ಷಗಳೇ ಕಳೆದು ತನಿಖೆ ಏಕೆ ಪೂರ್ಣಗೊಳ್ಳುತ್ತಿಲ್ಲ.
  • ತನಿಖೆ ವಿಳಂಬಕ್ಕೆ ಕಾರಣವೇನು ಎಂಬುದನ್ನಾದರೂ ಕೋರ್ಟ್‍ಗೆ ತಿಳಿಸಿ
  • ವಿಳಂಬ ಧೋರಣೆಯಿಂದ ಸಾಕ್ಷ್ಯಾಧಾರ ನಾಶವಾಗುವುದಿಲ್ಲವೇ?
  • ವಿಚಾರಣೆ ಹಂತದಲ್ಲಿ ಸಾಕ್ಷ್ಯಗಳು ನಿಮಗೆ ಪೂರಕವಾಗಿ ಸ್ಪಂದಿಸುತ್ತಾರೆಯೇ?
  • ನಿಮ್ಮ ಕೆಲಸ ಇದೇ ರೀತಿಯಾದರೆ ತಪ್ಪಿತಸ್ಥರ ದಾಳಿ ಹೇಗೆ?
  • `ಸ್ವಾಮಿ, ಸಂಸ್ಥೆ ಯಾವ ರೀತಿ ಕಾರ್ಯನಿರ್ವಹಿಸಬೇಕು?
  • ಎಷ್ಟು ತಿಂಗಳ ಒಳಗಾಗಿ ಪ್ರಕರಣಗಳು ಇತ್ಯರ್ಥಪಡಿಸಬೇಕು?
  • ಈ ಬಗ್ಗೆ ನ್ಯಾಯಪೀಠವೇ ಒಂದು ನಿರ್ದೇಶನ ನೀಡಲಿ.
  • ಪೀಠ ನೀಡುವ ನಿರ್ದೇಶನಕ್ಕೆ ಸಂಸ್ಥೆ ಬದ್ಧವಾಗಿರುತ್ತದೆ'
ಕೋರ್ಟ್ ತರಾಟೆ:
ಅಕ್ರಮ-ಸಕ್ರಮ:
ಆದೇಶ:
ಸಿಹಿ ಉಂಡವ ಸುಮ್ಮನಿರ್ತಾನಾ?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT