ಬಿಬಿಎಂಪಿ 
ಪ್ರಧಾನ ಸುದ್ದಿ

ವಿಧಾನಸಭೆಯಲ್ಲಿ ಮತ್ತೆ ಬಿಬಿಎಂಪಿ ವಿಭಜನೆ ವಿಧೇಯಕ ಅಂಗೀಕಾರ

ನಿರೀಕ್ಷೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗವಾಗಿ ವಿಭಜಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ...

ಬೆಂಗಳೂರು: ನಿರೀಕ್ಷೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗವಾಗಿ ವಿಭಜಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕವನ್ನು ಮಂಗಳವಾರ ಮತ್ತೊಮ್ಮೆ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ವಿರೋಧದ ನಡುವೆಯೂ ಪರಿಷತ್‌ನಲ್ಲಿ ಸೋತಿದ್ದ ಬಿಬಿಎಂಪಿ ವಿಭಜನೆಯ ಪಾಲಿಕೆಗಳ ತಿದ್ದಪಡಿ ವಿಧೇಯಕವನ್ನು ಇಂದು ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ.

ಈಗ ಇದನ್ನೇ ಪ್ರಮಾಣ ಪತ್ರದ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿ ಬಿಬಿಎಂಪಿ ಚುನಾವಣೆ ಮುಂದೂಡಲು ಸರ್ಕಾರ ಅವಕಾಶ ಕೇಳುವುದಕ್ಕೆ ಅವಕಾಶವಿದೆ. ಆದರೆ, ಈ ಪ್ರಯತ್ನಗಳು ಸರ್ಕಾರಕ್ಕೆ ಎಷ್ಟರ ಮಟ್ಟಿಗೆ ಫಲ ನೀಡುತ್ತವೆ ಎನ್ನುವುದು ಖಾತರಿ ಇಲ್ಲ.

ಈ ಹಿಂದೆ ವಿಶೇಷ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕಾರ ಪಡೆದಿದ್ದ ಬಿಬಿಎಂಪಿ ವಿಭಜಿಸುವ ತಿದ್ದುಪಡಿ ವಿಧೇಯಕಕ್ಕೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಸೋಲು ಉಂಟಾಗಿತ್ತು.

ವಿಧೇಯಕಕ್ಕೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ ಬಿಜೆಪಿ, ಇದೀಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ವಿಧೇಯಕಕ್ಕೆ ಸಹಿ ಹಾಕದಂತೆ ಮನವಿ ಮಾಡಲು ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ