ಟಿ.ಬಿ.ಜಯಚಂದ್ರ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಇನ್ನೆರಡು ದಿನದಲ್ಲಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ: ಜಯಚಂದ್ರ

ಲೋಕಾಯುಕ್ತ ಕಾಯ್ದೆಯನ್ನು ತಕ್ಷಣವೇ ತಿದ್ದುಪಡಿ ಮಾಡಬೇಕೆಂಬ ಮೇಲ್ಮನೆ ಸದಸ್ಯರ ಆಕ್ರೋಶಭರಿತ ಒಕ್ಕೊರಲ ಅಭಿಪ್ರಾಯಕ್ಕೆ ಸರ್ಕಾರ....

ಬೆಂಗಳೂರು/ವಿಧಾನಪರಿಷತ್: ಲೋಕಾಯುಕ್ತ ಕಾಯ್ದೆಯನ್ನು ತಕ್ಷಣವೇ ತಿದ್ದುಪಡಿ ಮಾಡಬೇಕೆಂಬ ಮೇಲ್ಮನೆ ಸದಸ್ಯರ ಆಕ್ರೋಶಭರಿತ ಒಕ್ಕೊರಲ ಅಭಿಪ್ರಾಯಕ್ಕೆ ಸರ್ಕಾರ ಸಮ್ಮತಿ ಸೂಚಿಸಿದ್ದು, ಇನ್ನೆರಡು ದಿನದಲ್ಲಿ ತಿದ್ದುಪಡಿ ಮಾಡಿದ ಹೊಸ ವಿಧೇಯಕವನ್ನು ಸದನದಲ್ಲಿ ಮಂಡಿಸುವುದಾಗಿ ಘೋಷಿಸಿದೆ.

ಲೋಕಾಯುಕ್ತ ಭ್ರಷ್ಟಾಚಾರ ಕುರಿತು ಗಮನ ಸೆಳೆವ ಸೂಚನೆ ಕುರಿತಂತೆ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಹಲವು ಸದಸ್ಯರು, ಹಾಲಿ ಇರುವ ಲೋಕಾಯುಕ್ತ ಕಾಯ್ದೆಯನ್ನು ರದ್ದುಗೊಳಿಸಬೇಕು ಅಥವಾ ತಿದ್ದುಪಡಿ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಇದಕ್ಕೆ ಉತ್ತರ ನೀಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ನಾವು ಜನರಿಂದ ಆಯ್ಕೆಯಾದವರು, ಜನರ ಅಪೇಕ್ಷೆಯನ್ನು ಈಡೇರಿಸುವುದು ನಮ್ಮ ಕರ್ತವ್ಯ. ಯಾರಿಗೂ ನಮ್ಮ ಹಕ್ಕನ್ನು ಒತ್ತೆ ಇಡುವುದು ಬೇಡವೆಂಬ ತೀರ್ಮಾನಕ್ಕೆ ಬರಲಾಗಿದೆ. ಈ ಸದನದಲ್ಲೂ ಸಹ ಲೋಕಾಯುಕ್ತ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು ಎಂಬ ಉತ್ತಮ ಸಲಹೆ ಬಂದಿದೆ. ಅದನ್ನು ಪರಿಗಣಿಸುತ್ತೇವೆ ಎಂದರು.

ಇನ್ನೆರಡು ದಿನಗಳಲ್ಲಿ ತಿದ್ದುಡಿಯಾದ ವಿಧೇಯಕವನ್ನು ಸದನದಲ್ಲಿ ಮಂಡಿಸುವುದಾಗಿ ಹೇಳಿದ ಸಚಿವರು, ಲೋಕಾಯುಕ್ತ ಕಾಯ್ದೆಯನ್ನು ರಚಿಸಿದ್ದು ಇದೇ ಸದನ. ಈ ಮೂಲಕ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಕಾಯ್ದೆ ರಚಿಸಿ ತಮ್ಮ ಕೈಯನ್ನು ತಾವೇ ಕಟ್ಟಿಕೊಂಡಂತಾಗಿದೆ. ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರು ಯಾರಿಗೆ ಬಾಧ್ಯಸ್ಥರು ಎಂಬುದು ಪ್ರಶ್ನೆ. ಹೀಗಾಗಿ ಸೂಕ್ತ ಕಾನೂನು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT