ಟಿ.ಬಿ.ಜಯಚಂದ್ರ 
ಪ್ರಧಾನ ಸುದ್ದಿ

ವಿಧಾನಸಭೆಯಲ್ಲಿ ಲೋಕಾಯುಕ್ತ ತಿದ್ದುಪಡಿ ವಿಧೇಯಕ ಮಂಡನೆ

ವಿವಾದಿತ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇಂದು ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ...

ಬೆಂಗಳೂರು/ವಿಧಾನಸಭೆ: ವಿವಾದಿತ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಇಂದು ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಕರ್ನಾಟಕ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಪ್ರತಿಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಕೇಸ್ ದಾಖಲಿಸಲು ಸದನದ ಅನುಮತಿ ಪಡೆಯುವ ಹಾಗೂ ಶಾಸಕರ ಮೇಲೆ ಕೇಸ್ ದಾಖಲಿಸಲು ಸ್ಪೀಕರ್ ಹಾಗೂ ಪರಿಷತ್ ಸಭಾಪತಿಗಳ ಅನುಮತಿ ಪಡೆಯಬೇಕು ಎಂಬ ಪ್ರಸ್ತಾಪವನ್ನು ಕೈ ಬಿಡಲಾಗಿದೆ.

ಹಾಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ವಿರುದ್ಧ ವ್ಯಕ್ತವಾಗಿರುವ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತರ ಪದಚ್ಯುತಿಗೆ ಕಾನೂನು ತಿದ್ದುಪಡಿ ಮಾಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು. ಆದರೆ ಸರ್ಕಾರ ಸಮಗ್ರ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಆದನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದೆ.

ಸರ್ಕಾರ ಮಂಡಿಸಿರುವ ಸಮಗ್ರ ಲೋಕಾಯುಕ್ತ ತಿದ್ದುಪಡಿಯಲ್ಲಿ ಕಾಯ್ದೆಯಲ್ಲಿ ಕೆಲವು ವಿಚಾರಗಳಿದ್ದು, ಅದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ವಿಧೇಯಕದಲ್ಲಿದ್ದ ವಿವಾದಾತ್ಮಕ ವಿಚಾರಗಳು

  • ಇನ್ನು ಮುಂದೆ ಲೋಕಾಯುಕ್ತರು ಭ್ರಷ್ಟಾಚಾರ ಪ್ರಕರಣಗಳಿಗೆ ಮಾತ್ರ ಸೀಮಿತವಾಗುತ್ತಾರೆ. ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವಂತಿಲ್ಲ.
  • ಮುಖ್ಯಮಂತ್ರಿಗಳ ವಿರುದ್ಧ ಆರೋಪ ಬಂದರೆ, ತನಿಖೆ ನಡೆಸುವುದಕ್ಕೆ ರಾಜ್ಯಪಾಲರ ಒಪ್ಪಿಗೆ ಪಡೆಯಬೇಕಾಗಿಲ್ಲ. ಅದರ ಬದಲಾಗಿ ವಿಧಾನಸಭೆ ಅಥವಾ ವಿಧಾನ ಪರಿಷತ್‌ಗೆ ಆ ಅಧಿಕಾರಿ ವರ್ಗಾಯಿಸಲ್ಪಡುತ್ತದೆ. ಮುಖ್ಯಮಂತ್ರಿ ವಿಧಾನಸಭೆ ಸದಸ್ಯನಾದರೆ ಸ್ಪೀಕರ್, ವಿಧಾನ ಪರಿಷತ್ ಸದಸ್ಯನಾದರೆ ಸಭಾಪತಿಗಳ ಒಪ್ಪಿಗೆ ಅಗತ್ಯ. ಶಾಸಕರ ಮತ್ತು ವಿಧಾನ ಪರಿಷತ್ ಸದಸ್ಯರ ವಿರುದ್ಧ ತನಿಖೆ ನಡೆಸುವುದಕ್ಕೂ ಇದೇ ಸೂತ್ರ ಅನ್ವಯ.
  • ಲೋಕಾಯುಕ್ತರ ಮತ್ತು ಉಪ ಲೋಕಾಯುಕ್ತರ ನೇಮಕಕ್ಕೆ ಇರುವ ಕೆಲ ಅಂಶಗಳಲ್ಲಿ ಬದಲಾವಣೆ. ಲೋಕಾಯುಕ್ತರ ಹುದ್ದೆಗೆ ನೇಮಕಗೊಳ್ಳುವ ವ್ಯಕ್ತಿ ಇನ್ನು ಮುಂದೆ ಹೈಕೋರ್ಟ್‌ನ ಮುಖ್ಯ ನ್ಯಾಯಧೀಶನಾಗಿ ಕೆಲಸ ಮಾಡಿರಬೇಕು ಎಂಬ ನಿಬಂಧನೆ ಕೈ ಬಿಡಲಾಗಿದ್ದು 10 ವರ್ಷಗಳ ಕಾಲ ಹೈಕೋರ್ಟ್ ನ್ಯಾಯಧೀಶನಾಗಿ ಕರ್ತವ್ಯ ಸಲ್ಲಿಸಿದ್ದರೆ ಸಾಕು.
  • ನ್ಯಾಯದೀಶರ ವಿಚಾರಣೆ ಕಾಯ್ದೆ ಪ್ರಕಾರ ಲೋಕಾಯುಕ್ತರ ಪದಚ್ಯುತಿ ವಿಧಾನವನ್ನು ಸರಳೀಕರಿಸಲಾಗಿದೆ. ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಸರಳ ಬಹುಮತದೊಂದಿಗೆ ಲೋಕಾಯುಕ್ತರ ಪದಚ್ಯುತಿಗೆ ತೆಗೆದುಕೊಂಡ ನಿರ್ಣಯಕ್ಕೆ ರಾಜ್ಯಪಾಲರು ಸಹಿ ಹಾಕುವ ಮೂಲಕ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರನ್ನು ಪದಚ್ಯುತಿ ಮಾಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್