ಸಂಸತ್ ಅಧಿವೇಶನ(ಪಿಟಿಐ ಚಿತ್ರ) 
ಪ್ರಧಾನ ಸುದ್ದಿ

ಮುಂದುವರಿದ ವಿರೋಧ ಪಕ್ಷಗಳ ಗದ್ದಲ: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಸಂಸತ್ ನ ಮುಂಗಾರು ಅಧಿವೇಶನ ಪ್ರಾರಂಭವಾದ 4 ನೇ ದಿನವೂ ಲೋಕಸಭಾ ಕಲಾಪ ವ್ಯರ್ಥವಾಗಿದೆ.

ನವದೆಹಲಿ: ಸಂಸತ್ ನ ಮುಂಗಾರು ಅಧಿವೇಶನದ 4 ನೇ ದಿನವೂ ಲೋಕಸಭಾ ಕಲಾಪ ವ್ಯರ್ಥವಾಗಿದ್ದು, ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡಿದ್ದರಿಂದ ಸೋಮವಾರದವರೆಗೆ ಮುಂದೂಡಲಾಗಿದೆ.

ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳ ಗದ್ದಲ ಮುಂದುವರೆದಿದ್ದು ಕಲಾಪವನ್ನು ಮಧ್ಯಾಹ್ನದ  ವರೆಗೆ ಮುಂದೂಡಲಾಗಿದೆ. ವ್ಯಾಪಂ ಹಗರಣ, ಲೈಟ್ ಮೋದಿ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಸಂಸತ್ ನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಅಧಿವೇಶನ ಪ್ರಾರಂಭವಾದಾಗಿನಿಂದಲೂ ಉಭಯ ಸದನಗಳ ಕಲಾಪಕ್ಕೆ ಅಡ್ಡಿಯುಂಟಾಗುತ್ತಿದ್ದು, ನಿರಂತರವಾಗಿ ಮುಂದೂಡಲಾಗುತ್ತಿದೆ.
ಅಧಿವೇಶನದ ಮೂರನೇ ದಿನವಾದ ಜು.23 ರಂದೂ ಸಹ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿ ಕೋಲಾಹಲ ಸೃಷ್ಠಿಸಿದ್ದರಿಂದ, ಲೋಕಸಭೆ, ರಾಜ್ಯಸಭೆಯ ಕಲಾಪಗಳನ್ನು ಪದೇ ಪದೇ ಮುಂದೂಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ