ಅಸಾದುದ್ದೀನ್ ಒವೈಸಿ 
ಪ್ರಧಾನ ಸುದ್ದಿ

ಯಾಕೂಬ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾದ್ದರಿಂದ ಅವನಿಗೆ ಗಲ್ಲು ಶಿಕ್ಷೆ: ಒವೈಸಿ

ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ...

ನವದೆಹಲಿ: ಮುಂಬೈ ಸರಣಿ  ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ ಎಂದು ಆಲ್ ಇಂಡಿಯಾ ಮಜ್‌ಲೀಸ್ ಇ ಇತ್ತೇಹದುಲ್ ಮಸ್ಲಿಮೀನ್ (ಎಐಎಂಐಎ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯ ಮತ್ತು ಬೆಂತ್ ಸಿಂಗ್ ಅವರನ್ನು ಹತ್ಯೆ ಮಾಡಿದ ಅಪರಾಧಿಗಳಿಗೆ ತಮಿಳ್ನಾಡು ಮತ್ತು ಪಂಜಾಬ್‌ನ ರಾಜಕೀಯ ಪಕ್ಷಗಳ ಬೆಂಬಲವಿದೆ. ಯಾಕೂಬ್ ಮೆಮನ್‌ಗೆ ಯಾವ ರಾಜಕೀಯ ಪಕ್ಷ ಬೆಂಬಲ ನೀಡುತ್ತಿದೆ? ಒಬ್ಬನಿಗೆ ಗಲ್ಲು ಶಿಕ್ಷೆ ವಿಧಿಸಬೇಕಿದ್ದರೆ ಆತನ ಧರ್ಮವನ್ನು ಗಣನೆಗೆ ತೆಗೆದುಕೊಳ್ಳಬಾರದು. ನಿರ್ದಿಷ್ಟ ಧರ್ಮವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಒಂದು ಒವೈಸಿ ಹೇಳಿದ್ದಾರೆ.

ರಾಜೀವ್ ಗಾಂಧಿ ಹತ್ಯಾ ಪ್ರಕರಣದ ಆರೋಪಿಗಳಾದ ಸಂತಾನಂ, ಮುರುಗನ್ ಮತ್ತು ಪೆರರಿವಾಳನ್ ಅವರನ್ನು ತಮಿಳ್ನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳು ಗಲ್ಲಿಗೇರಿಸದಂತೆ ತಡೆಹಿಡಿದಿವೆ. ಈ ಅಪರಾಧಿಗಳು ಸಲ್ಲಿಸಿದ ದಯಾ ಅರ್ಜಿಯನ್ನು ಸರ್ಕಾರ ಸ್ವೀಕರಿಸಿ ಅವರಿಗೆ ಜೀವಾವಾಧಿ ಶಿಕ್ಷೆ  ವಿಧಿಸಿದೆ ಎಂದು ಒವೈಸಿ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಜುಲೈ 30 ರಂದು ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು ಈತ ಕಳೆದ ವಾರ ಗವರ್ನರ್‌ಗೆ ದಯಾ ಅರ್ಜಿ ಸಲ್ಲಿಸಿದ್ದನು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ