ಅಸಾದುದ್ದೀನ್ ಒವೈಸಿ 
ಪ್ರಧಾನ ಸುದ್ದಿ

ಯಾಕೂಬ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾದ್ದರಿಂದ ಅವನಿಗೆ ಗಲ್ಲು ಶಿಕ್ಷೆ: ಒವೈಸಿ

ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ...

ನವದೆಹಲಿ: ಮುಂಬೈ ಸರಣಿ  ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ ಎಂದು ಆಲ್ ಇಂಡಿಯಾ ಮಜ್‌ಲೀಸ್ ಇ ಇತ್ತೇಹದುಲ್ ಮಸ್ಲಿಮೀನ್ (ಎಐಎಂಐಎ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯ ಮತ್ತು ಬೆಂತ್ ಸಿಂಗ್ ಅವರನ್ನು ಹತ್ಯೆ ಮಾಡಿದ ಅಪರಾಧಿಗಳಿಗೆ ತಮಿಳ್ನಾಡು ಮತ್ತು ಪಂಜಾಬ್‌ನ ರಾಜಕೀಯ ಪಕ್ಷಗಳ ಬೆಂಬಲವಿದೆ. ಯಾಕೂಬ್ ಮೆಮನ್‌ಗೆ ಯಾವ ರಾಜಕೀಯ ಪಕ್ಷ ಬೆಂಬಲ ನೀಡುತ್ತಿದೆ? ಒಬ್ಬನಿಗೆ ಗಲ್ಲು ಶಿಕ್ಷೆ ವಿಧಿಸಬೇಕಿದ್ದರೆ ಆತನ ಧರ್ಮವನ್ನು ಗಣನೆಗೆ ತೆಗೆದುಕೊಳ್ಳಬಾರದು. ನಿರ್ದಿಷ್ಟ ಧರ್ಮವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಒಂದು ಒವೈಸಿ ಹೇಳಿದ್ದಾರೆ.

ರಾಜೀವ್ ಗಾಂಧಿ ಹತ್ಯಾ ಪ್ರಕರಣದ ಆರೋಪಿಗಳಾದ ಸಂತಾನಂ, ಮುರುಗನ್ ಮತ್ತು ಪೆರರಿವಾಳನ್ ಅವರನ್ನು ತಮಿಳ್ನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳು ಗಲ್ಲಿಗೇರಿಸದಂತೆ ತಡೆಹಿಡಿದಿವೆ. ಈ ಅಪರಾಧಿಗಳು ಸಲ್ಲಿಸಿದ ದಯಾ ಅರ್ಜಿಯನ್ನು ಸರ್ಕಾರ ಸ್ವೀಕರಿಸಿ ಅವರಿಗೆ ಜೀವಾವಾಧಿ ಶಿಕ್ಷೆ  ವಿಧಿಸಿದೆ ಎಂದು ಒವೈಸಿ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಜುಲೈ 30 ರಂದು ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು ಈತ ಕಳೆದ ವಾರ ಗವರ್ನರ್‌ಗೆ ದಯಾ ಅರ್ಜಿ ಸಲ್ಲಿಸಿದ್ದನು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟೆಹ್ರಾನ್ ಶಾಂತಿ ಪ್ರಸ್ತಾವನೆಗೆ ಒಪ್ಪದ ಟ್ರಂಪ್: ಇರಾನ್–ಅಮೆರಿಕ ಸಂಘರ್ಷ ಪುನರಾರಂಭ ಸಾಧ್ಯತೆ, ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ

US-Iran Peace Talks: ಇರಾನ್ ಪ್ರಸ್ತಾವನೆ ಸ್ವೀಕಾರಾರ್ಹವಾಗಿರುತ್ತದೆ ಎಂದೆನಿಸುತ್ತಿಲ್ಲ, ಮರುಪರಿಶೀಲಿಸುತ್ತೇನೆ; ಟ್ರಂಪ್

ಯುದ್ದ ಬಯಸಿದ್ದು ನಾವಲ್ಲ-ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ

ಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶ

IPL 2026: ಮುಂಬೈಗೆ ಮತ್ತೆ ಸೋಲು, 8 ವಿಕೆಟ್ ಗಳಿಂದ ಗೆದ್ದು ಬೀಗಿದ CSK!

SCROLL FOR NEXT