ಅಸಾದುದ್ದೀನ್ ಒವೈಸಿ 
ಪ್ರಧಾನ ಸುದ್ದಿ

ಯಾಕೂಬ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾದ್ದರಿಂದ ಅವನಿಗೆ ಗಲ್ಲು ಶಿಕ್ಷೆ: ಒವೈಸಿ

ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ...

ನವದೆಹಲಿ: ಮುಂಬೈ ಸರಣಿ  ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ ಎಂದು ಆಲ್ ಇಂಡಿಯಾ ಮಜ್‌ಲೀಸ್ ಇ ಇತ್ತೇಹದುಲ್ ಮಸ್ಲಿಮೀನ್ (ಎಐಎಂಐಎ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯ ಮತ್ತು ಬೆಂತ್ ಸಿಂಗ್ ಅವರನ್ನು ಹತ್ಯೆ ಮಾಡಿದ ಅಪರಾಧಿಗಳಿಗೆ ತಮಿಳ್ನಾಡು ಮತ್ತು ಪಂಜಾಬ್‌ನ ರಾಜಕೀಯ ಪಕ್ಷಗಳ ಬೆಂಬಲವಿದೆ. ಯಾಕೂಬ್ ಮೆಮನ್‌ಗೆ ಯಾವ ರಾಜಕೀಯ ಪಕ್ಷ ಬೆಂಬಲ ನೀಡುತ್ತಿದೆ? ಒಬ್ಬನಿಗೆ ಗಲ್ಲು ಶಿಕ್ಷೆ ವಿಧಿಸಬೇಕಿದ್ದರೆ ಆತನ ಧರ್ಮವನ್ನು ಗಣನೆಗೆ ತೆಗೆದುಕೊಳ್ಳಬಾರದು. ನಿರ್ದಿಷ್ಟ ಧರ್ಮವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಒಂದು ಒವೈಸಿ ಹೇಳಿದ್ದಾರೆ.

ರಾಜೀವ್ ಗಾಂಧಿ ಹತ್ಯಾ ಪ್ರಕರಣದ ಆರೋಪಿಗಳಾದ ಸಂತಾನಂ, ಮುರುಗನ್ ಮತ್ತು ಪೆರರಿವಾಳನ್ ಅವರನ್ನು ತಮಿಳ್ನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳು ಗಲ್ಲಿಗೇರಿಸದಂತೆ ತಡೆಹಿಡಿದಿವೆ. ಈ ಅಪರಾಧಿಗಳು ಸಲ್ಲಿಸಿದ ದಯಾ ಅರ್ಜಿಯನ್ನು ಸರ್ಕಾರ ಸ್ವೀಕರಿಸಿ ಅವರಿಗೆ ಜೀವಾವಾಧಿ ಶಿಕ್ಷೆ  ವಿಧಿಸಿದೆ ಎಂದು ಒವೈಸಿ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಜುಲೈ 30 ರಂದು ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು ಈತ ಕಳೆದ ವಾರ ಗವರ್ನರ್‌ಗೆ ದಯಾ ಅರ್ಜಿ ಸಲ್ಲಿಸಿದ್ದನು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT