ಅಸಾದುದ್ದೀನ್ ಒವೈಸಿ 
ಪ್ರಧಾನ ಸುದ್ದಿ

ಯಾಕೂಬ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾದ್ದರಿಂದ ಅವನಿಗೆ ಗಲ್ಲು ಶಿಕ್ಷೆ: ಒವೈಸಿ

ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ...

ನವದೆಹಲಿ: ಮುಂಬೈ ಸರಣಿ  ಬಾಂಬ್ ಸ್ಫೋಟ ಪ್ರಕರಣದ ರುವಾರಿ ಯಾಕೂಬ್ ಮೆಮನ್ ನಿರ್ದಿಷ್ಟ ಧರ್ಮಕ್ಕೆ ಸೇರಿದವನಾಗಿದ್ದರಿಂದಲೇ ಆತನನ್ನು ಗಲ್ಲಿಗೇರಿಸಲಾಗುತ್ತಿದೆ ಎಂದು ಆಲ್ ಇಂಡಿಯಾ ಮಜ್‌ಲೀಸ್ ಇ ಇತ್ತೇಹದುಲ್ ಮಸ್ಲಿಮೀನ್ (ಎಐಎಂಐಎ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯ ಮತ್ತು ಬೆಂತ್ ಸಿಂಗ್ ಅವರನ್ನು ಹತ್ಯೆ ಮಾಡಿದ ಅಪರಾಧಿಗಳಿಗೆ ತಮಿಳ್ನಾಡು ಮತ್ತು ಪಂಜಾಬ್‌ನ ರಾಜಕೀಯ ಪಕ್ಷಗಳ ಬೆಂಬಲವಿದೆ. ಯಾಕೂಬ್ ಮೆಮನ್‌ಗೆ ಯಾವ ರಾಜಕೀಯ ಪಕ್ಷ ಬೆಂಬಲ ನೀಡುತ್ತಿದೆ? ಒಬ್ಬನಿಗೆ ಗಲ್ಲು ಶಿಕ್ಷೆ ವಿಧಿಸಬೇಕಿದ್ದರೆ ಆತನ ಧರ್ಮವನ್ನು ಗಣನೆಗೆ ತೆಗೆದುಕೊಳ್ಳಬಾರದು. ನಿರ್ದಿಷ್ಟ ಧರ್ಮವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಒಂದು ಒವೈಸಿ ಹೇಳಿದ್ದಾರೆ.

ರಾಜೀವ್ ಗಾಂಧಿ ಹತ್ಯಾ ಪ್ರಕರಣದ ಆರೋಪಿಗಳಾದ ಸಂತಾನಂ, ಮುರುಗನ್ ಮತ್ತು ಪೆರರಿವಾಳನ್ ಅವರನ್ನು ತಮಿಳ್ನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳು ಗಲ್ಲಿಗೇರಿಸದಂತೆ ತಡೆಹಿಡಿದಿವೆ. ಈ ಅಪರಾಧಿಗಳು ಸಲ್ಲಿಸಿದ ದಯಾ ಅರ್ಜಿಯನ್ನು ಸರ್ಕಾರ ಸ್ವೀಕರಿಸಿ ಅವರಿಗೆ ಜೀವಾವಾಧಿ ಶಿಕ್ಷೆ  ವಿಧಿಸಿದೆ ಎಂದು ಒವೈಸಿ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಜುಲೈ 30 ರಂದು ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು ಈತ ಕಳೆದ ವಾರ ಗವರ್ನರ್‌ಗೆ ದಯಾ ಅರ್ಜಿ ಸಲ್ಲಿಸಿದ್ದನು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಚಾರ್ ಸಾಥಿಯಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಆದೇಶ ವಾಪಸ್: ಸಚಿವ ಸಿಂಧಿಯಾ

ಕೋಚ್ ಗಂಭೀರ್ ಜೊತೆ ಮುನಿಸು: ODI ನಲ್ಲಿ 53ನೇ ಶತಕ ಸಿಡಿಸಿ ವಿಶ್ವದ ಏಕೈಕ ಬ್ಯಾಟರ್ Virat Kohli!

ಕರ್ನಾಟಕ ರಾಜಭವನಕ್ಕೆ ಲೋಕಭವನ ಎಂದು ಮರುನಾಮಕರಣ

ಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ- Video

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಾವಧಿ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

SCROLL FOR NEXT