ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಜಾರ್ಖಂಡದಲ್ಲಿ ೩೦ ವಾಹನಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳು

ಜಾರ್ಖಂಡದ ಬೋಕೋರಾವ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಸಂಬಂಧಿಸಿದ ಸೆಂಟ್ರಲ್ ಕೋಲ್ ಫಿಲ್ಡ್ ಲಿಮಿಟೆಡ್ (ಸಿಸಿಎಲ್) ಗೆ ಸೇರಿದ ೩೦ ವಾಹನಗಳನ್ನು

ರಾಂಚಿ: ಜಾರ್ಖಂಡದ ಬೋಕೋರಾವ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಸಂಬಂಧಿಸಿದ ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್(ಸಿಸಿಎಲ್) ಗೆ ಸೇರಿದ ೩೦ ವಾಹನಗಳನ್ನು ಮಾವೋವಾದಿಗಳು ಬೆಂಕಿಗೆ ಆಹುತಿಯಾಗಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಂಚಿಯಿಂದ ೧೩೦ ಕಿಮೀ ದೂರದಲ್ಲಿರುವ ಬರ್ಮೋ ಪ್ರದೇಶದ ಸಿಸಿಎಲ್ ಯೋಜನಾ ಪ್ರದೇಶಕ್ಕೆ ಶುಕ್ರವಾರ ರಾತ್ರಿ ದಾಳಿಮಾಡಿದ ೧೦೦ಕ್ಕೂ ಹೆಚ್ಚು ಜನ ಮಾವೋವಾದಿಗಳು ಈ ಕೃತ್ಯವನ್ನು ಎಸಗಿದ್ದಾರೆ.

ಭದ್ರತಾ ಸಿಬ್ಬಂದಿಗಳಿಗೆ ಥಳಿಸಿ ಅವರನ್ನು ಓಡಿಹೋಗುವಂತೆ ಹೇಳಿ ವಾಹನಗಳಿಗೆ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ.

ರಾಜ್ಯದ ೨೪ ಜಿಲ್ಲೆಗಳ ೧೮ ಜಿಲ್ಲೆಗಳಲ್ಲಿ ಮಾವೋವಾದಿಗಳ ಚಟುವಟಿಕೆ ತೀವ್ರವಾಗಿದೆ. ಈ ಕೃತ್ಯವೆಸಗಿದ ಮಾವೋವಾದಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT