ಮುಂಬೈ ಸರಣಿ ಸ್ಫೋಟದ ತಪ್ಪಿತಸ್ಥ ಯಾಕೂಬ್ 
ಪ್ರಧಾನ ಸುದ್ದಿ

ಯಾಕೂಬ್ ಕ್ಷಮಾದಾನ ಕೋರಿ ರಾಜಕಾರಣಿಗಳ, ನ್ಯಾಯಾಧೀಶರ, ಗಣ್ಯರ ಮನವಿ

ಬಿಜೆಪಿ ಪಕ್ಷವೂ ಸೇರಿದಂತೆ ಹಲವು ಪಕ್ಷದ ಮುಖಂಡರು, ಖ್ಯಾತ ನ್ಯಾಯಾಧೀಶರು ಮತ್ತಿತರ ಗಣ್ಯರು ಮುಂಬೈ ಸರಣಿ ಸ್ಫೋಟದ ತಪ್ಪಿತಸ್ಥ ಯಾಕೂಬ್

ನವದೆಹಲಿ: ಬಿಜೆಪಿ ಪಕ್ಷವೂ ಸೇರಿದಂತೆ ಹಲವು ಪಕ್ಷದ ಮುಖಂಡರು, ಖ್ಯಾತ ನ್ಯಾಯಾಧೀಶರು ಮತ್ತಿತರ ಗಣ್ಯರು ಮುಂಬೈ ಸರಣಿ ಸ್ಫೋಟದ ತಪ್ಪಿತಸ್ಥ ಯಾಕೂಬ್ ಮೆಮನ್ ಬೆಂಬಲಕ್ಕೆ ಭಾನುವಾರ ಒಗ್ಗಟ್ಟಾಗಿ ನಿಂತಿದ್ದು, ಅವರ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಕ್ಷಮಾದಾನ ನೀಡುವಂತೆ ರಾಷ್ಟ್ರಾಧ್ಯಕ್ಷ ಪ್ರಣಬ್ ಮುಖರ್ಜಿ ಅವರಿಗೆ ನೂತನ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯ ಸಹಿದಾರರಲ್ಲಿ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಮತ್ತು ಮಾಜಿ ಬಿಜೆಪಿ ಸದಸ್ಯ ರಾಮ್ ಜೇಠ್ಮಲಾನಿ ಕೂಡ ಸೇರಿದ್ದು, ಜುಲೈ ೩೦ ಕ್ಕೆ ನಿಗದಿಯಾಗಿರುವ ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ.

ಈ ೧೫ ಪುಟಗಳ ಅರ್ಜಿಯಲ್ಲಿ ಹಲವಾರು ಕಾನೂನಾತ್ಮಕ ಅಂಶಗಳನ್ನು ಮತ್ತು ಅಂತರಾಷ್ಟ್ರೀಯ ಮಾನದಂಡಗಳನ್ನು ಚರ್ಚಿಸಿದ್ದು ಮೆಮನ್ ನ ಕ್ಷಮಾದಾನಕ್ಕೆ ವಾದ ಮಂಡಿಸಲಾಗಿದೆ.

"ಕ್ಷಮಾದಾನ ನೀಡುವುದರಿಂದ ಈ ರಾಷ್ಟ್ರ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂಬ ಶಕ್ತಿಯುತ ಸಂದೇಶವನ್ನು ಸಾರುವುದಲ್ಲದೆ ಒಂದೆ ದೇಶವಾಗಿ ನಾವು ನ್ಯಾಯಬದ್ಧವಾದ ಕ್ಷಮಾದಾನದ ಸಂದೇಶ ಮತ್ತು ಮಹತ್ವವನ್ನು ಸಾರುವ ಅವಕಾಶ ಇದೆ. ಮನುಷ್ಯರನ್ನು ಗಲ್ಲಿಗೇರಿಸುವುದು ರಕ್ತ ಹರಿಸುವುದು ಈ ದೇಶವನ್ನು ಸುರಕ್ಷಿತವಾಗಿಸುವುದಿಲ್ಲ ಬದಲಾಗಿ ನಮ್ಮನ್ನು ಕೆಳಕ್ಕೆ ನೂಕುತ್ತದೆ" ಎಂದು ಸಹಿದಾರರು ವಾದಿಸಿದ್ದಾರೆ,

ಕಾಂಗ್ರೆಸ್ ಸಂಸದ ಮಣುಶಂಕರ್ ಅಯ್ಯರ್, ಸಿಪಿಎಂ ನ ಸೀತಾರಮ್ ಯೆಚೂರಿ, ಡಿಎಂಕೆಯ ಟಿ ಶಿವಾ, ಚಿತ್ರನಟ ನಾಸಿರುದ್ದೀನ್ ಷಾ, ನಿರ್ದೇಶಕ ಮಹೇಶ್ ಭಟ್, ನ್ಯಾಯಧೀಶರುಗಳಾದ  ಪನಚಂದ್ ಜೈನ, ಎಸ ಎನ್ ಭಾರ್ಘವ, ಪಿ ಬಿ ಸಾವಂತ್, ಎಚ್ ಸುರೇಶ್, ಕೆ ಪಿ ಶಿವ ಸುಬ್ರಮಣ್ಯನ್, ನಾಗಮೋಹನ್ ದಾಸ್, ಅಕ್ಯಾಡೆಮಿಕ್ ವಲಯದ ಇರ್ಫಾನ್ ಹಬೀಬ್, ಅರ್ಜುನ್ ದೇವ್, ಡಿ ಎನ್ ಜಾ ಸಾಮಾಜಿಕ ಕಾರ್ಯಕರ್ತರಾದ ಅರುಣ್ ರಾಯ್, ಜೀನ್ ಡ್ರೀಜ್ ಮತ್ತಿತರು ಕ್ಷಮಾದಾನ ಕೋರಿ ಸಹಿ ಮಾಡಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT