ಅಶ್ವಿನ್ ರಾವ್ 
ಪ್ರಧಾನ ಸುದ್ದಿ

ಲೋಕಾ ಭ್ರಷ್ಟಾಚಾರ: ಅಶ್ವಿನ್ ರಾವ್ 9 ದಿನ ಎಸ್‌ಐಟಿ ವಶಕ್ಕೆ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ  ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಮಂಗಳವಾರ 9 ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಶಕ್ಕೆ ನೀಡಿದೆ.

ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ಅಶ್ವಿನ್ ರಾವ್ ಅವರನ್ನು ವಶಕ್ಕೆ ಪಡೆದಿದ್ದ ಬೆಂಗಳೂರು ಪಶ್ವಿಮ ವಲಯ ಡಿಸಿಪಿ ಲಾಬೂರಾಮ್ ನೇತೃತ್ವದ ಎಸ್‌ಐಟಿ ತಂಡ, ಇಂದು ಆರೋಪಿಯನ್ನು ಲೋಕಾಯುಕ್ತ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಕೋರ್ಟ್, ಅಶ್ವಿನ್ ರಾವ್ ಅವರನ್ನು ಆಗಸ್ಟ್ 6ರವರೆಗೆ ಎಸ್ಐಟಿ ವಶಕ್ಕೆ ನೀಡಿದೆ. ಅಲ್ಲದೆ ವಿಚಾರಣೆ ವೇಳೆ ಆರೋಪಿಗೆ ಸೂಕ್ತ ಸಮಯಕ್ಕೆ ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಎಸ್ಐಟಿ ಸೂಚಿಸಿದೆ.


ಪ್ರಕರಣ ಸಂಬಂಧ ಇದುವರೆಗೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿರುವ ಎಸ್‌ಐಟಿ, ನಿನ್ನೆಯಷ್ಟೇ ಲೋಕಾಯುಕ್ತ ಪಿಆರ್‍ಒ, ಜಂಟಿ ಆಯುಕ್ತ ಸೈಯ್ಯದ್ ರಿಯಾಜ್ ಅವರನ್ನು ಆಗಸ್ಟ್ 5ರವರೆಗೆ ವಿಶೇಷ ತನಿಖಾ ತಂಡದ ವಶಕ್ಕೆ ಒಪ್ಪಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿತ್ತು.

ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಬಿಡಿಎ ಬ್ರೋಕರ್ ವಾಸು, ವಿ.ಭಾಸ್ಕರ್ ಅಲಿಯಾಸ್ 420 ಭಾಸ್ಕರ್ ಗಾಗಿ ಎಸ್ಐಟಿ ತಂಡ ತೀವ್ರ ಶೋಧ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT