ಪಾಲಂ ವಿಮಾನ ನಿಲ್ದಾಣದಲ್ಲಿ ಕಲಾಂ ಪಾರ್ಥಿವ ಶರೀರ 
ಪ್ರಧಾನ ಸುದ್ದಿ

ಹುಟ್ಟೂರಿನತ್ತ ಡಾ.ಎಪಿಜೆ ಅಬ್ದುಲ್ ಕಲಾಂ ಪಾರ್ಥಿವ ಶರೀರ

ಸೋಮವಾರ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು...

ನವದೆಹಲಿ: ಸೋಮವಾರ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ಬುಧವಾರ ಅವರ ಹುಟ್ಟೂರು ರಾಮೇಶ್ವರಂಗೆ ರವಾನಿಸಲಾಗುತ್ತಿದೆ.

ದೆಹಲಿಯಲ್ಲಿ ಗಣ್ಯರ ಅಂತಿಮ ನಮನದ ಬಳಿಕ ಇಂದು ಬೆಳಗ್ಗೆ ಕಲಾಂ ಅವರ ಪಾರ್ಥಿವ ಶರೀರವನ್ನು ಹೊತ್ತ ವಿಶೇಷ ವಿಮಾನ ಪಾಲಂ ವಿಮಾನ ನಿಲ್ದಾಣದಿಂದ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂಗೆ ತೆರಳುತ್ತಿದೆ.

ನಿನ್ನೆ ಅಸ್ಸಾಂನ ಗುವಾಹಟಿಯಿಂದ ವಾಯುಪಡೆಯ ವಿಶೇಷಾ ವಿಮಾನದಲ್ಲಿ ಕಲಾಂ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗಿತ್ತು. ದೆಹಲಿ ಪಾಲಂ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹಾಗೂ ಮೂರು ಸೇನಾಪಡೆಗಳ ಮುಖ್ಯಸ್ಥರು ಅಗಲಿದ ಭಾರತ ರತ್ನಕ್ಕೆ ಅಂತಿಮ ನಮನ ಸಲ್ಲಿಸಿದ್ದರು.

83 ವರ್ಷದ ಅಬ್ದುಲ್ ಕಲಾಂ ನಿನ್ನೆ ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT