ದಿವಂಗತ ಭಾರತೀಯ ವಿಜ್ಞಾನಿ ಹಾಗು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ದೇಹ 
ಪ್ರಧಾನ ಸುದ್ದಿ

ಕಲಾಂ ರಾಮೇಶ್ವರಂ ಮನೆಯ ಸುತ್ತ ಭಾರಿ ಜನಸ್ತೋಮ

ದಿವಂಗತ ಭಾರತೀಯ ವಿಜ್ಞಾನಿ ಹಾಗು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ರಾಮೇಶ್ವರಂ ಗೃಹದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ ಎಂದು ಬುಧವಾರ

ಚೆನ್ನೈ: ದಿವಂಗತ ಭಾರತೀಯ ವಿಜ್ಞಾನಿ ಹಾಗು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ರಾಮೇಶ್ವರಂ ಗೃಹದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ ಎಂದು ಬುಧವಾರ ಸಂಬಧಿಯೊಬ್ಬರು ತಿಳಿಸಿದ್ದಾರೆ.

"ಕೊನೆಯ ವಿಧಿಗೆ ಗೌರವ ಸಮರ್ಪಿಸಲು ಕಲಾಂ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ" ಎಂದು ಕಲಾಂ ಅವರ ಸಹೋದರರ ಮೊಮ್ಮಗ ಶೇಕ್ ಸಲೀಮ್ ತಿಳಿಸಿದ್ದಾರೆ.

"ನಮ್ಮ ಸಂಬಂಧಿಗಳೆಲ್ಲರೂ ಕೊನೆಯ ವಿಧಿಯಲ್ಲಿ ಭಾಗವಹಿಸಲು ಬಂದಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

ಹಿಂದೂ ಧರ್ಮದ ಪುಣ್ಯ ಕ್ಷೇತ್ರವಾದ ಸಮುದ್ರ ತೀರದ ರಾಮೇಶ್ವರಂ ಚೆನ್ನೈನಿಂದ ೬೦೦ ಕಿಮೀ ದೂರದಲ್ಲಿದೆ. ಕಲಾಂ ಅವರು ಜನಿಸಿದ್ದು ಇಲ್ಲಿಯೇ ಹಾಗು ಬಡತನದಲ್ಲಿ ತಮ್ಮ ಬಾಲ್ಯವನ್ನು ಇಲ್ಲಿ ಕಳೆದಿದ್ದರು.

ಬಸ್ ನಿಲ್ದಾಣದ ಬಳಿ ಕಲಾಂ ಅವರ ದೇಹವನ್ನು ಇರಿಸಲಾಗುವುದು ಮತ್ತು ಸಾರ್ವಜನಿಕರು ಅಂತಿಮ ದರ್ಶನವನ್ನು ಪಡೆಯಬಹುದು ಎಂದು ಸಲೀಮ್ ತಿಳಿಸಿದ್ದಾರೆ.

"ಬುಧವಾರ ರಾತ್ರಿ ೮ ರವರೆಗೆ ಸಾರ್ವಜನಿಕರು ದರ್ಶನವನ್ನು ಪಡೆಯಬಹುದಾಗಿದ್ದು, ನಂತರ ಮಾಸ್ಕ್ ರಸ್ತೆಯಲ್ಲಿರುವ 'ಕಲಾಂ ಮನೆ'ಗೆ ದೇಹವನ್ನು ಕೊಂಡೊಯ್ಯಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ೧೦:೩೦ಕ್ಕೆ ಕೊನೆಯ ವಿಧಿಯನ್ನು ಪೂರೈಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕುಟುಂಬದ ಮನವಿ ಮೇರೆಗೆ ಕಲಾಂ ಅವರ ಅಂತಿಮ ವಿಧಿಗೆ ಜಯಲಲಿತಾ ಸರ್ಕಾರ ಜಾಗ ನೀಡಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT