ದಿವಂಗತ ಭಾರತೀಯ ವಿಜ್ಞಾನಿ ಹಾಗು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ದೇಹ 
ಪ್ರಧಾನ ಸುದ್ದಿ

ಕಲಾಂ ರಾಮೇಶ್ವರಂ ಮನೆಯ ಸುತ್ತ ಭಾರಿ ಜನಸ್ತೋಮ

ದಿವಂಗತ ಭಾರತೀಯ ವಿಜ್ಞಾನಿ ಹಾಗು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ರಾಮೇಶ್ವರಂ ಗೃಹದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ ಎಂದು ಬುಧವಾರ

ಚೆನ್ನೈ: ದಿವಂಗತ ಭಾರತೀಯ ವಿಜ್ಞಾನಿ ಹಾಗು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ರಾಮೇಶ್ವರಂ ಗೃಹದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ ಎಂದು ಬುಧವಾರ ಸಂಬಧಿಯೊಬ್ಬರು ತಿಳಿಸಿದ್ದಾರೆ.

"ಕೊನೆಯ ವಿಧಿಗೆ ಗೌರವ ಸಮರ್ಪಿಸಲು ಕಲಾಂ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ" ಎಂದು ಕಲಾಂ ಅವರ ಸಹೋದರರ ಮೊಮ್ಮಗ ಶೇಕ್ ಸಲೀಮ್ ತಿಳಿಸಿದ್ದಾರೆ.

"ನಮ್ಮ ಸಂಬಂಧಿಗಳೆಲ್ಲರೂ ಕೊನೆಯ ವಿಧಿಯಲ್ಲಿ ಭಾಗವಹಿಸಲು ಬಂದಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

ಹಿಂದೂ ಧರ್ಮದ ಪುಣ್ಯ ಕ್ಷೇತ್ರವಾದ ಸಮುದ್ರ ತೀರದ ರಾಮೇಶ್ವರಂ ಚೆನ್ನೈನಿಂದ ೬೦೦ ಕಿಮೀ ದೂರದಲ್ಲಿದೆ. ಕಲಾಂ ಅವರು ಜನಿಸಿದ್ದು ಇಲ್ಲಿಯೇ ಹಾಗು ಬಡತನದಲ್ಲಿ ತಮ್ಮ ಬಾಲ್ಯವನ್ನು ಇಲ್ಲಿ ಕಳೆದಿದ್ದರು.

ಬಸ್ ನಿಲ್ದಾಣದ ಬಳಿ ಕಲಾಂ ಅವರ ದೇಹವನ್ನು ಇರಿಸಲಾಗುವುದು ಮತ್ತು ಸಾರ್ವಜನಿಕರು ಅಂತಿಮ ದರ್ಶನವನ್ನು ಪಡೆಯಬಹುದು ಎಂದು ಸಲೀಮ್ ತಿಳಿಸಿದ್ದಾರೆ.

"ಬುಧವಾರ ರಾತ್ರಿ ೮ ರವರೆಗೆ ಸಾರ್ವಜನಿಕರು ದರ್ಶನವನ್ನು ಪಡೆಯಬಹುದಾಗಿದ್ದು, ನಂತರ ಮಾಸ್ಕ್ ರಸ್ತೆಯಲ್ಲಿರುವ 'ಕಲಾಂ ಮನೆ'ಗೆ ದೇಹವನ್ನು ಕೊಂಡೊಯ್ಯಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ೧೦:೩೦ಕ್ಕೆ ಕೊನೆಯ ವಿಧಿಯನ್ನು ಪೂರೈಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕುಟುಂಬದ ಮನವಿ ಮೇರೆಗೆ ಕಲಾಂ ಅವರ ಅಂತಿಮ ವಿಧಿಗೆ ಜಯಲಲಿತಾ ಸರ್ಕಾರ ಜಾಗ ನೀಡಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

SCROLL FOR NEXT