ಯಾಕೂಬ್ ಮೆಮನ್ ಗೆ ಗಲ್ಲು 
ಪ್ರಧಾನ ಸುದ್ದಿ

ಕೊನೆಗೂ ಯಾಕೂಬ್ ಮೆಮನ್ ಗೆ ಗಲ್ಲು

1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್​ಗೆ ಗುರುವಾರ ಬೆಳಗ್ಗೆ 6.30 ವೇಳೆಯಲ್ಲಿ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ...

ಕಾನ್ಪುರ: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್​ಗೆ ಗುರುವಾರ ಬೆಳಗ್ಗೆ 6.30 ವೇಳೆಯಲ್ಲಿ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

1993ರಲ್ಲಿ ನಡೆದ ಮುಂಬೈ ಸರಣಿ ಸ್ಫೋಟದಲ್ಲಿ ಸುಮಾರು 273 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಭೂಗತ ಪಾತಕಿಗೆ ಇಂದು ಮಹಾರಾಷ್ಟ್ರದ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ಜಾರಿ ಮಾಡಲಾಗಿದೆ. ಗಲ್ಲು ಶಿಕ್ಷೆ ಜಾರಿ ವೇಳೆ ನ್ಯಾಯಾಧೀಶರು, ಜೈಲು ವೈದ್ಯರು, ಡಿಐಜಿ ಮತ್ತು ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಉಪಸ್ಥಿತರಿದ್ದರು.

ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಲಾಗಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ನಿನ್ನೆ ಮತ್ತೆ ಯಾಕೂಬ್ ಮೆಮನ್ ಪರ ವಕೀಲರು ನಿನ್ನೆ ಮತ್ತೆ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಅರ್ಜಿಯ ಕುರಿತು ಕೇಂದ್ರ ಗೃಹ ಇಲಾಖೆ ಮತ್ತು ರಾಷ್ಟ್ರಪತಿ ಕಚೇರಿ ಮತ್ತೆ ವಿಚಾರಣೆ ನಡೆಸುವ ಯಾವುದೇ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಹೀಗಾಗಿ ಎರಡನೇ ಬಾರಿಯೂ ಯಾಕೂಬ್ ಕ್ಷಮಾದಾನ ಅರ್ಜಿಯನ್ನು ತಿರಸ್ಕೃತಗೊಳಿಸಲಾಗಿತ್ತು.

ಇನ್ನು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಸುಮಾರು 3ಗಂಟೆಯಲ್ಲಿ ವಿಚಾರಣೆ ನಡೆಸಲಾಯಿತು.  ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಯಾಕುಬ್ ಸುಪ್ರೀಂ ಕೋರ್ಟಿಗೆ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರ ನಿವಾಸದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ನಂತರ ಸುಪ್ರೀಂ ಕೋರ್ಟ್​ನ ತ್ರಿಸದಸ್ಯ ಪೀಠ ಕೊಠಡಿ ಸಂಖ್ಯೆ 4 ರಲ್ಲಿ ಸುಮಾರು 90 ನಿಮಿಷ ವಿಚಾರಣೆ ನಡೆಸಲಾಯಿತು. 3.20 ಕ್ಕೆ ವಿಚಾರಣೆ ಪೂರ್ಣಗೊಳಿಸಿದ ಪೀಠ ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿತು. ಬುಧವಾರ ಸುಪ್ರೀಂ ಕೋರ್ಟ್​ನ ತ್ರಿಸದಸ್ಯ ಪೀಠ ಯಾಕುಬ್​ನ ಕ್ಯುರೇಟಿವ್ ಅರ್ಜಿಯನ್ನು ತಿರಸ್ಕರಿಸಿತ್ತು ಮತ್ತು ಗಲ್ಲು ಶಿಕ್ಷೆಯನ್ನು ವಿಧಿಸುವಂತೆ ಆದೇಶಿತ್ತು. ಯಾಕುಬ್ ಮೇನನ್ ಮೃತ ದೇಹ ಮಧ್ಯಾಹ್ನದ ವೇಳೆಗೆ ಮುಂಬೈಗೆ ರವಾನಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT