ಗುರುವಾರ ಬೆಳಗ್ಗೆ ನೇಣುಗಂಬಕ್ಕೆ ಏರಿಸಲಾದ ಮುಂಬೈ ಸರಣಿ ಸ್ಫೋಟದ ಆರೋಪಿ ಯಾಕೂಬ್ ಮೆಮನ್ 
ಪ್ರಧಾನ ಸುದ್ದಿ

ಯಾಕೂಬ್ ದೇಹ ಕುಟುಂಬದ ವಶಕ್ಕೆ

ಗುರುವಾರ ಬೆಳಗ್ಗೆ ನೇಣುಗಂಬಕ್ಕೆ ಏರಿಸಲಾದ ಮುಂಬೈ ಸರಣಿ ಸ್ಫೋಟದ ಆರೋಪಿ ಯಾಕೂಬ್ ಮೆಮನ್ ನ ದೇಹವನ್ನು ಅವರ ಕುಟುಂಬದ ವಶಕ್ಕೆ...

ನಾಗಪುರ: ಗುರುವಾರ ಬೆಳಗ್ಗೆ ನೇಣುಗಂಬಕ್ಕೆ ಏರಿಸಲಾದ ಮುಂಬೈ ಸರಣಿ ಸ್ಫೋಟದ ಆರೋಪಿ ಯಾಕೂಬ್ ಮೆಮನ್ ನ ದೇಹವನ್ನು ಅವರ ಕುಟುಂಬದ ವಶಕ್ಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೂ ಮೊದಲು ಅಧಿಕಾರಿಗಳು ಕುಟುಂಬ ವಶಕ್ಕೆ ನೀಡದೆ ಜೈಲಿನ ಆವರಣದಲ್ಲೇ ಅಂತಿಮ ವಿಧಿಯನ್ನು ನಡೆಸಲು ನಿರ್ಧರಿಸಿದ್ದರು.

ಆದರೆ ಯಾಕೂಬ್ ನನ್ನು ಗಲ್ಲಿಗೇರಿಸಿದ ನಂತರ, ಕುಟುಂಬ ಅಂತಿಮ ವಿಧಿಗಳನ್ನು ಮುಂಬೈನಲ್ಲಿ ನೆರವೇರಿಸಲು ಅನುವು ಮಾಡಿಕೊಡಲು ದೇಹವನ್ನು ವಶಕ್ಕೆ ನೀಡುವಂತೆ  ಮೆಮನ್ ಸಹೋದರ ಸುಲೈಮಾನ್ ಜೈಲು ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಕೂಡಲೆ ವಿಚಾರಣೆ ಮಾಡಿ, ಕಠಿಣ ಷರತ್ತುಗಳೋಂದಿಗೆ ಅನುಮತಿ ನೀಡಿ ದೇಹವನ್ನು ವಶಕ್ಕೆ ನೀಡಲಾಗಿದೆ.

ದೇಹವನ್ನು ನಾಗಪುರ ವಿಮಾನ ನಿಲ್ದಾಣದಿಂದ ವೈಮಾನಿಕ ಆಂಬ್ಯುಲೆನ್ಸ್ ಮೂಲಕ ಮುಂಬೈಗೆ ಗುರುವಾರ ಸಂಜೆ ಕೊಂಡೊಯ್ಯಲಾಗುವುದು.

ಈ ಹಿಂದೆ ದೆಹಲಿ ಸಂಸತ್ತಿನ ದಾಳಿಯ ತಪ್ಪಿತಸ್ಥ ಅಪ್ಜಲ್ ಗುರುವಿನ ದೇಶವನ್ನು ಕುಟುಂಬ ವಶಕ್ಕೆ ನೀಡದೆ ತಿಹಾರ್ ಜೈಲಿನಲ್ಲಿ ಮಣ್ಣುಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT