ಕನ್ನಡಿಗರಾದ ಲಕ್ಷ್ಮಿಕಾಂತ್, ವಿಜಯ್ ಕುಮಾರ್ 
ಪ್ರಧಾನ ಸುದ್ದಿ

ಇಸಿಸ್‌ನಿಂದ ಇಬ್ಬರು ಕನ್ನಡಿಗರು ಸೇರಿದಂತೆ ನಾಲ್ವರು ಭಾರತೀಯರ ಅಪಹರಣ

ಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ ಪೈಕಿ ಇಬ್ಬರು ಕನ್ನಡಿಗರು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ...

ಲಿಬಿಯಾ: ಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ ಪೈಕಿ ಇಬ್ಬರು ಕನ್ನಡಿಗರು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ವಿಜಯ್ ಕುಮಾರ್ ಬೆಂಗಳೂರು ನಿವಾಸಿ ಹಾಗೂ ಲಕ್ಷ್ಮಿಕಾಂತ್ ರಾಯಚೂರಿನ ನಿವಾಸಿಯಾಗಿದ್ದಾರೆ. ಮತ್ತಿಬ್ಬರು ಹೈದರಬಾದಿನವರು ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಮಾಹಿತಿ ನೀಡಿದ್ದಾರೆ.

ಇರಾಕ್ ಮತ್ತು ಸಿರಿಯಾದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುವ ಮೂಲಕ ಅಟ್ಟಹಾಸ ಮೆರೆಯುತ್ತಿರುವ ಇಸಿಸ್ ಉಗ್ರರು ಭಾರತದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಯ ಬೆನ್ನಲ್ಲೇ ಲಿಬಿಯಾದಲ್ಲಿ ಇಸಿಸ್ ಉಗ್ರರು ನಾಲ್ವರು ಭಾರತೀಯರನ್ನು ಅಪಹರಿಸಿದ್ದರು.

ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ನಾಲ್ವರು ಭಾರತೀಯರನ್ನು ನಿನ್ನೆ ಲಿಬಿಯಾದ ಟ್ರೈಪೋಲೀಯ ಸಿರ್ತೆ ನಗರದಿಂದ ಇಸಿಸ್ ಭಯೋತ್ಪಾದಕರು ಅಪಹರಿಸಿದ್ದರು.

ಅಪಹರಣದ ಬಗ್ಗೆ ಲಿಬಿಯಾ ದೇಶದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಭಾರತೀಯರ ರಕ್ಷಣೆ ಕುರಿತಂತೆ ಲಿಬಿಯಾ ದೇಶದೊಡನೆ ಭಾರತ ಚರ್ಚಿಸುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT