ಕನ್ನಡಿಗರಾದ ಲಕ್ಷ್ಮಿಕಾಂತ್, ವಿಜಯ್ ಕುಮಾರ್ 
ಪ್ರಧಾನ ಸುದ್ದಿ

ಇಸಿಸ್ ಉಗ್ರರು ಅಪಹರಿಸಿದ್ದ ಕನ್ನಡಿಗರಿಬ್ಬರ ಬಿಡುಗಡೆ

ಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ

ಲಿಬಿಯಾ: ಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ ಪೈಕಿ ಇಬ್ಬರು ಕನ್ನಡಿಗರನ್ನು ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ನಿವಾಸಿ ವಿಜಯ್ ಕುಮಾರ್ ಹಾಗೂ ರಾಯಚೂರಿನ ಲಕ್ಷ್ಮಿಕಾಂತ್ ಅವರನ್ನು ಉಗ್ರರು ಬಿಡುಗಡೆಗೊಳಿಸಿದ್ದಾರೆ ಎಂದು ಲಿಬಿಯಾದ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ ಉಗ್ರರ ಬಳಿಯಿರುವ ಹೈದರಬಾದಿನ ಗೋಪಿಕೃಷ್ಣ ಮತ್ತು ಬಲರಾಮ್ ಅವರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಮಾಹಿತಿ ನೀಡಿದ್ದಾರೆ.

ಇರಾಕ್ ಮತ್ತು ಸಿರಿಯಾದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುವ ಮೂಲಕ ಅಟ್ಟಹಾಸ ಮೆರೆಯುತ್ತಿರುವ ಇಸಿಸ್ ಉಗ್ರರು ಭಾರತದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಯ ಬೆನ್ನಲ್ಲೇ ಲಿಬಿಯಾದಲ್ಲಿ ಇಸಿಸ್ ಉಗ್ರರು ನಾಲ್ವರು ಭಾರತೀಯರನ್ನು ಅಪಹರಿಸಿದ್ದರು.

ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ನಾಲ್ವರು ಭಾರತೀಯರನ್ನು ನಿನ್ನೆ ಲಿಬಿಯಾದ ಟ್ರೈಪೋಲೀಯ ಸಿರ್ತೆ ನಗರದಿಂದ ಇಸಿಸ್ ಭಯೋತ್ಪಾದಕರು ಅಪಹರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT