ಬರ ಪರಿಸ್ಥಿತಿ (ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ರು.200 ಕೋಟಿ ಬರಪರಿಹಾರ

ಕರ್ನಾಟಕದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕೈಗೊಳ್ಳಲು ಕೇಂದ್ರ ಸರ್ಕಾರ 2014-15ನೇ ಸಾಲಿನಲ್ಲಿ ರು.200.35 ಕೋಟಿ ಮಂಜೂರು ಮಾಡಿದೆ.

ನವದೆಹಲಿ: ಕರ್ನಾಟಕದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕೈಗೊಳ್ಳಲು ಕೇಂದ್ರ ಸರ್ಕಾರ 2014-15ನೇ ಸಾಲಿನಲ್ಲಿ ರು.200.35 ಕೋಟಿ ಮಂಜೂರು ಮಾಡಿದೆ.

ಬರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ಕೇಂದ್ರದ ಸಚಿವರ ತಂಡವು ರಾಜ್ಯಕ್ಕೆ ಭೇಟಿ ನೀಡಿ ಬರದಿಂದಾಗಿರುವ ಬೆಳೆ ಹಾನಿ ಅಂದಾಜು  ಮಾಡಿದ್ದು, ರಾಷ್ಟ್ರೀಯ ಪ್ರಕೋಪ ಪರಿಹಾರ ನಿಧಿಯಿಂದ (ಎನ್ ಡಿಆರ್‍ಎಫ್ ) ರು.200.35 ಕೋಟಿ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಕೃಷಿ ಖಾತೆ ರಾಜ್ಯ ಸಚಿವ ಮೋಹನ್ ಭಾಯ್ ಕುಂಡಾರಿಯಾ ರಾಜ್ಯಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಅಂದರೆ, ರು.1962.99 ಕೋಟಿ, ಉತ್ತರಪ್ರದೇಶಕ್ಕೆ ರು.777.34 ಕೋಟಿ, ಆಂಧ್ರಪ್ರದೇಶಕ್ಕೆ ರು.237. 51 ಕೋಟಿ ಮಂಜೂರು ಮಾಡಲಾಗಿದೆ. ಪ್ರಕೃತಿ ವಿಕೋಪ, ರೋಗ  ಮತ್ತಿತರ ಕಾರಣಗಳಿಂದ ಬೆಳೆ ಹಾನಿಯಾದರೆ ರೈತರಿಗೆ ಪರಿಹಾರ ಒದಗಿಸಲು ರಾಷ್ಟ್ರೀಯ ಬೆಳೆ ವಿಮಾ ಯೋಜನೆ, ಮಾರ್ಪಡಿತ ರಾಷ್ಟ್ರೀಯ ಕೃಷಿ ವಿಮಾ ಯೋಜನೆ, ಹವಾಮಾನ ಆಧರಿತ  ಬೆಳೆ ವಿಮೆ ಯೋಜನೆ, ತೆಂಗು ವಿಮೆ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT