ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ 
ಪ್ರಧಾನ ಸುದ್ದಿ

ಶಿಯಾಗಳಿಗೆ ತೊಂದರೆ; ಮುಲಾಯಂ ಭೇಟಿ ಮಾಡಲಿರುವ ಮುಸ್ಲಿಂ ಗುರುಗಳು

ಶಿಯಾ ಮುಸ್ಲಿಂ ಸಮುದಾಯಕ್ಕೆ ಸೇರಿದವರನ್ನು ಗುರಿಯಾಗಿಸಲಾಗಿದೆ ಎಂದು ದೂರಿ ಶಿಯಾ ಮುಸ್ಲಿಂ ಗುರುಗಳು ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್

ಲಕನೌ: ಶಿಯಾ ಮುಸ್ಲಿಂ ಸಮುದಾಯಕ್ಕೆ ಸೇರಿದವರನ್ನು ಗುರಿಯಾಗಿಸಲಾಗಿದೆ ಎಂದು ದೂರಿ ಶಿಯಾ ಮುಸ್ಲಿಂ ಗುರುಗಳು ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರನ್ನು ಅವರ ದೆಹಲಿಯ ಗೃಹದಲ್ಲಿ ಮುಂದಿನವರ ಭೇಟಿಯಾಗಲಿದ್ದಾರೆ ಎಂದು ವಕ್ತಾರ ಶನಿವಾರ ತಿಳಿಸಿದ್ದಾರೆ.

ದೇಶದೆಲ್ಲೆಡೆಯಿಂದ ಬರಲಿರುವ ಈ ಕ್ಲೆರಿಕ್ ಗಳು ಅಲ್ಪಸಂಖ್ಯಾತ ಸಮುದಾಯದ ತೊಂದರೆಗಳನ್ನು ಕೂಡ ಮುಲಾಯಂ ಅವರೊಂದಿಗೆ ಚರ್ಚಿಸಲಿದ್ದಾರೆ.

ಶಿಯಾ ಕ್ಲೆರಿಕ್ ಮೌಲಾನ ಕಾಲ್ಬೆ ಜವ್ವಡ್ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿ ಆಯೋಜಿಸಲಾಗಿದ್ದ ಸಭೆಯಲ್ಲಿ, ಈ ದೂರಿನ ನಂತರವೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕ್ರಮ ಕೈಗೊಳ್ಳದಿದ್ದರೆ, ಯಾದವ್ ಅವರ ಗೃಹದ ಮುಂದೆ ಧರಣಿ ಕೂರುವುದಾಗಿ ನಿಶ್ಚಯಿಸಲಾಗಿದೆ.

"ಅಗತ್ಯ ಬಿದ್ದರೆ ನಾವು ನ್ಯಾಯಾಂಗ ಬಂಧನಕ್ಕೂ ಸಿದ್ಧ" ಎಂದು ವಕ್ತಾರ ತಿಳಿಸಿದ್ದಾರೆ.

ಜುಲೈ ೨೭ರಂದು ಅಧಿಕಾರಿಗಳು ಲಕನೌನ ಶಾಹಿ ಮಸೀದಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಮಹಿಳೆಯರು, ಮಕ್ಕಳು ಮತ್ತು ಹಿರಿಯರನ್ನು ಥಳಿಸಿದ್ದನ್ನು ತಿಳಿಸಿದ ಅವರು, ವಕ್ಫ್ ಜಮೀನನ್ನು ಕಬಳಿಸಲು ಪ್ರಯತ್ನಿಸುತ್ತಿರುವ ಕೆಲವು ಪ್ರಭಾವಿ ವ್ಯಕ್ತಿಗಳ ಬೆಂಬಲಕ್ಕೆ ಸರ್ಕಾರ ನಿಂತಿದೆ ಎಂದು ಅವರು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT