ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 
ಪ್ರಧಾನ ಸುದ್ದಿ

ಕರ್ನಾಟಕದ ಮೇಲ್ಮನವಿ ನಾಚಿಕೆಗೇಡು: ಎಐಡಿಎಂಕೆ

ಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ

ಚೆನ್ನೈ: ಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು "ನಾಚಿಕೆಗೇಡು" ಎಂದಿರುವ ಎಐಡಿಎಂಕೆ ಪಕ್ಷ, ಜಯಲಲಿತಾ ಈ ಬಾರಿಯೂ ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲಿದ್ದಾರೆ ಎಂದಿದೆ.

"೧೮ ವರ್ಷದ ಈ ಹಳೆಯ ಪ್ರಕರಣದಲ್ಲಿ ಎಲ್ಲ ವಾದ ವಿವಾದ ಮುಗಿದ ಮೇಲೆ ಹೈಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿರುವುದು ನಾಚಿಕೆಗೇಡಿನ ಕೆಲಸ" ಎಐಡಿಎಂಕೆ ತಮಿಳು ದಿನಪತ್ರಿಕೆ "ಡಾ. ನಮಧು ಎಂಜಿಆರ್" ಮುಖಪುಟದ ಲೇಖನದಲ್ಲಿ ಹೇಳಿದೆ.

ನೆನ್ನೆ ನಡೆದ ಸಂಪುಟ ಸಭೆಯ ನಂತರ ಜಯಲಲಿತಾ ನಿರಪರಾಧಿ ಎಂದು ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿತ್ತು.

"ತಮ್ಮ ವಿರುದ್ಧದ ಪಿತೂರಿಗಳನ್ನು ಬದಿಗೆ ನೂಕಿ ಮತ್ತೆ ನಿರಪರಾಧಿ ಎಂದು ಸಾಬೀತುಪಡಿಸಿ ಕುಲುಮೆಯಿಂದ ಹೊರಬರುವ ಅಪ್ಪಟ ಚಿನ್ನದಂತೆ ಪುರಚಿ ಥಲೈವಿ ಅಮ್ಮ ಕೊಡವಿ ಬರಲಿದ್ದಾರೆ ಎಂದು ತಮಿಳುನಾಡಿನ ಜನರಿಗೆ ನಂಬಿಕೆಯಿದೆ" ಎಂದು ಲೇಖನದಲ್ಲಿ ಬರೆಯಲಾಗಿದೆ.

ಈ ಲೇಖನದಲ್ಲಿ ಡಿಎಂಕೆ ಮತ್ತು ಪಿಎಂಕೆ ಪಕ್ಷಗಳನ್ನು ಕೂಡ ತರಾಟೆಗೆ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT