ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 
ಪ್ರಧಾನ ಸುದ್ದಿ

ಕರ್ನಾಟಕದ ಮೇಲ್ಮನವಿ ನಾಚಿಕೆಗೇಡು: ಎಐಡಿಎಂಕೆ

ಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ

ಚೆನ್ನೈ: ಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು "ನಾಚಿಕೆಗೇಡು" ಎಂದಿರುವ ಎಐಡಿಎಂಕೆ ಪಕ್ಷ, ಜಯಲಲಿತಾ ಈ ಬಾರಿಯೂ ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲಿದ್ದಾರೆ ಎಂದಿದೆ.

"೧೮ ವರ್ಷದ ಈ ಹಳೆಯ ಪ್ರಕರಣದಲ್ಲಿ ಎಲ್ಲ ವಾದ ವಿವಾದ ಮುಗಿದ ಮೇಲೆ ಹೈಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿರುವುದು ನಾಚಿಕೆಗೇಡಿನ ಕೆಲಸ" ಎಐಡಿಎಂಕೆ ತಮಿಳು ದಿನಪತ್ರಿಕೆ "ಡಾ. ನಮಧು ಎಂಜಿಆರ್" ಮುಖಪುಟದ ಲೇಖನದಲ್ಲಿ ಹೇಳಿದೆ.

ನೆನ್ನೆ ನಡೆದ ಸಂಪುಟ ಸಭೆಯ ನಂತರ ಜಯಲಲಿತಾ ನಿರಪರಾಧಿ ಎಂದು ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿತ್ತು.

"ತಮ್ಮ ವಿರುದ್ಧದ ಪಿತೂರಿಗಳನ್ನು ಬದಿಗೆ ನೂಕಿ ಮತ್ತೆ ನಿರಪರಾಧಿ ಎಂದು ಸಾಬೀತುಪಡಿಸಿ ಕುಲುಮೆಯಿಂದ ಹೊರಬರುವ ಅಪ್ಪಟ ಚಿನ್ನದಂತೆ ಪುರಚಿ ಥಲೈವಿ ಅಮ್ಮ ಕೊಡವಿ ಬರಲಿದ್ದಾರೆ ಎಂದು ತಮಿಳುನಾಡಿನ ಜನರಿಗೆ ನಂಬಿಕೆಯಿದೆ" ಎಂದು ಲೇಖನದಲ್ಲಿ ಬರೆಯಲಾಗಿದೆ.

ಈ ಲೇಖನದಲ್ಲಿ ಡಿಎಂಕೆ ಮತ್ತು ಪಿಎಂಕೆ ಪಕ್ಷಗಳನ್ನು ಕೂಡ ತರಾಟೆಗೆ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT