ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಳವು ಮಾಡಿದ್ದಕ್ಕೆ ಮಗನಿಗೇ ಬೆಂಕಿ ಹಚ್ಚಿದ ತಾಯಿ

ಆಘಾತಕಾರಿ ಘಟನೆಯೊಂದರಲ್ಲಿ ತನ್ನ ಏಳು ವರ್ಷದ ಮಗ ೫ ರೂ ಕದ್ದನೆಂದು ದೂರಿ ರಾಜಸ್ಥಾನದ ಮಹಿಳೆಯೊಬ್ಬಳು ಅವನಿಗೆ ಬೆಂಕಿ ಹಚ್ಚಿದ್ದಕ್ಕೆ ಮಗುವಿಗೆ ತೀವ್ರ

ಜೈಪುರ: ಆಘಾತಕಾರಿ ಘಟನೆಯೊಂದರಲ್ಲಿ ತನ್ನ ಏಳು ವರ್ಷದ ಮಗ ೫ ರೂ ಕದ್ದನೆಂದು ದೂರಿ ರಾಜಸ್ಥಾನದ ಮಹಿಳೆಯೊಬ್ಬಳು ಅವನಿಗೆ ಬೆಂಕಿ ಹಚ್ಚಿದ್ದಕ್ಕೆ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಜೈಪುರದಿಂದ ೩೫೦ ಕಿಮೀ ದೂರದಲ್ಲಿರುವ ಬಿಕನೇರ್ ಜಿಲ್ಲೆಯ ರಾಮಪುರದಲ್ಲಿ ಈ ಘಟನೆ ನಡೆದಿದೆ. ಮಗುವಿಗೆ ೩೦% ಸುಟ್ಟ ಗಾಯಗಳಾಗಿವೆ. ಅವನ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

"ನಾವು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ" ಎಂದು ಬಿಕನೇರ್ ನ ಪೊಲೀಸ್ ಮಹಾನಿರ್ದೇಶಕ ಸಂತೋಶ್ ಕುಮಾರ್ ತಿಳಿಸಿದ್ದಾರೆ. "ನಾವಿನ್ನೂ ಅವರನ್ನು ಬಂಧಿಸಿಲ್ಲ. ತನಿಖೆ ಪ್ರಗತಿಯಲ್ಲಿದೆ" ಎಂದಿದ್ದಾರೆ.

ತಿಂಡಿ ಕೊಳ್ಳಲು ತನ್ನಮ್ಮನಿಗೆ ಹೇಳದೆ ಡಬ್ಬಿಯಿಂದ ೫ ರುಪಾಯಿಯನ್ನು ಆ ಬಾಲಕ ಎತ್ತುಕೊಂಡಿದ್ದ ಎನ್ನಲಾಗಿದೆ. ಇದನ್ನು ತಿಳಿದ ತಾಯಿ ಮಗನನ್ನು ಥಳಿಸಿದ್ದಲ್ಲದೆ, ಅವನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ ಎಂದು ದೂರಲಾಗಿದೆ.

ಮಗುವಿನ ಆಕ್ರಂದನ ಕೇಳಿದ ನೆರೆಹೊರೆಯವರು ಮಗುವನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನನ್ನ ಉದ್ದೇಶ ಮಗನಿಗೆ ಶಿಕ್ಷೆ ನೀಡುವುದಷ್ಟೇ ಆಗಿತ್ತು ಎಂದು ತಾಯಿ ಪೊಲೀಸರಿಗೆ ತಿಳಿಸಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT