ಮ್ಯಾಗಿ ನೂಡಲ್ಸ್ ಮತ್ತು ಆರೋಗ್ಯ ಸಚಿವ ಯುಟಿ ಖಾದರ್ 
ಪ್ರಧಾನ ಸುದ್ದಿ

ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ತಾತ್ಕಾಲಿಕ ನಿಷೇಧ

ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ಅನ್ನು ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ...

ಬೆಂಗಳೂರು: ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ಅನ್ನು ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯಗಳಿಗೆ ಸೂಚನೆ ನೀಡಿದ್ದ ಕೇಂದ್ರ ಸರ್ಕಾರ ಮ್ಯಾಗಿ ಉತ್ಪನ್ನವನ್ನು ತಾತ್ಕಾಲಿಕವಾಗಿ ನಿಷೇಧಿಸುವಂತೆ ಸೂಚನೆ ನೀಡಿದ್ದು, ಅದರನ್ವಯ ಕರ್ನಾಟಕದಲ್ಲಿ ಮ್ಯಾಗಿ ಉತ್ಪನ್ನ ಮತ್ತು ಉತ್ಪಾದನೆಯ ಮೇಲೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಈಗಾಗಲೇ ನಂಜನಗೂಡಿನಲ್ಲಿ ಮ್ಯಾಗಿ ನೂಡಲ್ಸ್ ತಯಾರಿಕಾ ಘಟಕವನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಮ್ಯಾಗಿ ನೂಡಲ್ಸ್ ಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವ ಯುಟಿ ಖಾದರ್ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಉತ್ಪನ್ನವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರದ ಆಹಾರ ಭದ್ರತಾ ಇಲಾಖೆ ನೀಡಿದ್ದ ಸೂಚನೆಯ ಹಿನ್ನಲೆಯಲ್ಲಿ ಈ ನಿಷೇಧ ಹೇರಲಾಗಿದೆ ಎಂದು ಅವರು ತಿಳಿಸಿದರು.

ಅಲ್ಲದೆ ನಂಜನಗೂಡಿನಲ್ಲಿರುವ ಮ್ಯಾಗಿ ಸಂಸ್ಥೆಯ ತಯಾರಿಕಾ ಘಟಕವನ್ನು ಸ್ಥಗಿತಗೊಳಿಸುವಂತೆ ನೆಸ್ಲೆ ಸಂಸ್ಥೆಗೆ ಸೂಚಿಸಲಾಗಿದ್ದು, ಮಾಲ್ ಗಳು ಮತ್ತು ಇತರೆ ಅಂಗಡಿಗಳಲ್ಲಿರುವ ಮ್ಯಾಗಿ ಉತ್ಪನ್ನಗಳನ್ನು ವಾಪಸ್ ಪಡೆಯುವಂತೆ ಹೇಳಲಾಗಿದೆ. ಅಂಗಡಿ ಮಾಲೀಕರು ತಾವಾಗಿಯೇ ಮ್ಯಾಗಿ ಉತ್ಪನ್ನವನ್ನು ವಾಪಸ್ ನೀಡಬೇಕು. ಆಂಗಡಿ ಮಾಲ್ ಇತರೆ ಮಾರಾಟ ಪ್ರದೇಶಗಳಲ್ಲಿ ಮ್ಯಾಗಿ ಮಾರಾಟ ಕಂಡುಬಂದರೆ ಕ್ರಮ ಕೈಗೊಳ್ಳಲಾಗುತ್ತದೆ.

ಇದಕ್ಕಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದ್ದು,  ಆಹಾರ ಭದ್ರತಾ ಇಲಾಖೆಯ ಅಧಿಕಾರಿಗಳು ಮತ್ತು ಡಿಹೆಚ್ ಓ ಅಧಿಕಾರಿಗಳು ಅವರ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ವೀಕ್ಷಣೆ ಮಾಡುತ್ತಾರೆ. ಈ ವೇಳೆ ಅಕ್ರಮವಾಗಿ ಮ್ಯಾಗಿ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನಾಗಲಿ ಅಥವಾ ದಾಸ್ತಾನು ಇಟ್ಟಿರುವುದು ಕಂಡಬಂದರೆ ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಾದರ್ ಸ್ವಷ್ಟಪಡಿಸಿದರು.

ಪ್ರಸ್ತುತ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಮ್ಯಾಗಿ ಉತ್ಪನ್ನವನ್ನು ನಿಷೇಧಿಸಲಾಗಿದ್ದು, ರಾಜ್ಯ ಸರ್ಕಾರ ಕೂಡ ಮ್ಯಾಗಿ ಉತ್ಪನ್ನದ ಪರೀಕ್ಷೆ ನಡೆಸುತ್ತಿದೆ. ಹೀಗಾಗಿ ಉತ್ಪನ್ನದ ಬಗ್ಗೆ ಕೇಂದ್ರ ಸರ್ಕಾರ ಮುಂದಿನ ಆದೇಶ ನೀಡುವವರೆಗೂ ಮ್ಯಾಗಿ ಮೇಲಿನ ನಿಷೇಧ ಮುಂದುವೆರಯುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT