ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸಮಾಜವಾದಿ ಪಕ್ಷದ ಶಾಸಕನ ವಿರುದ್ಧ ಬರೆದಿದ್ದಕ್ಕೆ ಪತ್ರಕರ್ತನ ಸಜೀವ ದಹನ

ಸಮಾಜವಾದಿ ಪಕ್ಷದ ಶಾಸಕ ರಾಮಮೂರ್ತಿ ಅವರ ವಿದುದ್ಧ ಸಾಮಾಜಿಕ ಮಾಧ್ಯಮದ ಪತ್ರಕರ್ತ ಜಾಗೇಂದ್ರ ಸಿಂಗ್ ಫೇಸ್ ಬುಕಿನಲ್ಲಿ ಬರೆದ ಎಂಬ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ

ಸಮಾಜವಾದಿ ಪಕ್ಷದ ಶಾಸಕ ರಾಮಮೂರ್ತಿ ಅವರ ವಿದುದ್ಧ ಸಾಮಾಜಿಕ ಮಾಧ್ಯಮದ ಪತ್ರಕರ್ತ ಜಾಗೇಂದ್ರ ಸಿಂಗ್ ಫೇಸ್ ಬುಕಿನಲ್ಲಿ ಬರೆದ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಶಹಜೆಹನಾಪುರದಲ್ಲಿ ಅವನನ್ನು ಸಜೀವ ದಹನ ಮಾಡಿದ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಶಾಸಕನ ವಿರುದ್ಧ ಫೇಸ್ ಬುಕ್ಕಿನಲ್ಲಿ ಬರೆದದ್ದಲ್ಲದೆ, ದಿನಪತ್ರಿಕೆಯಲ್ಲಿ ಈ ಶಾಸಕದ ಅಕ್ರಮ ಗಣಿಗಾರಿಕೆ ಮತ್ತು ಜಮೀನು ಕಬಳಿಕೆಯ ಬಗ್ಗೆ ಕೂಡ ಬರೆದಿದ್ದ ಎನ್ನಲಾಗಿದೆ.

ಈ ಆರೋಪಗಳು ಶಾಸಕನನ್ನು ಕೆರಳಿಸಿ ಪತ್ರಕರ್ತನ ವಿರುದ್ಧ ಮಿಥ್ಯಾರೋಪಗಳನ್ನು ಸೃಷ್ಟಿಸಿ ಪೊಲೀಸರಿಗೆ ದೂರು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಕುಟುಂಬದವರು ಹೇಳುವ ಪ್ರಕಾರ ಜಾಗೇಂದ್ರ ಅವರನ್ನು ಬಂಧಿಸಲು ಪೊಲೀಸರು ಬಂದರು ಹಾಗೂ ಜಾಗೇಂದ್ರನಿಗೆ ಬೆಂಕಿ ಹಚ್ಚಿದರು. ಆಸ್ಪತ್ರೆಗೆ ಕೊಂಡೊಯ್ಯುವಾಗ ಅವನು ಮೃತಪಟ್ತ ಎಂದು ಆಪಾದಿಸಿದ್ದಾರೆ.

ಇದನ್ನು ಅಲ್ಲಗೆಳೆದಿರುವ ಪೊಲೀಸರು ನಾವು ಅವರನ್ನು ಬಂದಿಸಲು ಹೋಗಿದ್ದಾಗ ಪತ್ರಕರ್ತ ಆತ್ಮಹತ್ಯೆ ಮಾಡಿಕೊಂಡನು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT