ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮಯನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ದಾಳಿ: 100ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ

ಭಾರತೀಯ ಸೇನೆಯ ವಿಶೇಷ ಕಾರ್ಯಾಚರಣೆ ಪಡೆಗಳು ಭಾರತ-ಮಯನ್ಮಾರ್ ಗಡಿಯಲ್ಲಿ ನಡೆಸಿದ ದಾಳಿಗೆ...

ನವದೆಹಲಿ: ಭಾರತೀಯ ಸೇನೆಯ ವಿಶೇಷ ಕಾರ್ಯಾಚರಣೆ ಪಡೆಗಳು ಭಾರತ-ಮಯನ್ಮಾರ್ ಗಡಿಯಲ್ಲಿ ನಡೆಸಿದ ದಾಳಿಗೆ ಎರಡು ಎನ್ ಎಸ್ ಸಿ ಎನ್ ಭಯೋತ್ಪಾದಕ ಶಿಬಿರಗಳು ನಾಶಗೊಂಡು 100ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಮಣಿಪುರದ ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ದಾರ್ಗಾ ರೆಜಿಮೆಂಟ್ ನ ೧೮ ಸೈನಿಕರನ್ನು ಕೊಂದಿದ್ದರು.

ಭಾರತೀಯ ನೆಲದಲ್ಲಿ ಹಾಗೂ ಮಯನ್ಮಾರ್ ದೇಶದ ಕೆಲವು ಭಾಗಗಳಲ್ಲಿ ಭಯೋತ್ಪಾದಕ ಗುಂಪುಗಳನ್ನು ನಾಶಪಡಿಸಲು ಸೇನೆ ನಡೆಸಿದ ಅಪೂರ್ವ ಕಾರ್ಯಾಚರಣೆ ಇದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಲ್ಲದೆ ಮಣಿಪುರ ಮತ್ತು ನಾಗಾಲ್ಯಾಂಡಿನಲ್ಲು ಭಯೋತ್ಪಾದ್ಕಾರ ಅಟ್ಟಡಗಿಸಲು ಸೇನೆ ಕಾರ್ಯಾಚರಣೆ ನಡೆಸಿದೆ.

"ಮೃತಪಟ್ಟ ಭಯೋತ್ಪಾದಕರ ನಿಖರ ಸಂಖ್ಯೆ ಇನ್ನೂ ತಿಳಿದಿಲ್ಲ. ಆದರೆ ಇದು 40 ಕ್ಕೂ  ಹೆಚ್ಚಿರಬಹುದು. ಭಯೋತ್ಪಾದಕರಲ್ಲಿದ್ದ ಅಪಾರ ಸಂಖ್ಯೆಯ ಶಸ್ತ್ರಾಸ್ತ್ರಗಳನ್ನು ನಾಶಪಡಿಸಲಾಗಿದೆ. ಈ ದಾಳಿಯಲ್ಲಿ ವಿಶೇಷ ಪಡೆಗಳ ಯಾವುದೇ ಸೈನಿಕರು ಗಾಯಗೊಂಡಿಲ್ಲ. ಭಯೋತ್ಪಾದಕರನ್ನು ಹುಡುಕಿ ಅಟ್ಟಡಗಿಸುವುದಕ್ಕೆ ನಾವು ಬದ್ಧರಾಗಿದ್ದೇವೆ" ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ದಾಳಿಯ ವೇಳೆಯಲ್ಲಿ ಭಾರತೀಯ ವೈಮಾನಿಕ ದಳದ ಎಂಐ-೧೭ ವಿಮಾನದಿಂದ ಕಾಡಿನೊಳಗೆ ವಿಶೇಷ ಪಡೆಗಳ ಕಮ್ಯಾಂಡೊಗಳನ್ನು ಇಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

"ನಾವು ಮಯನ್ಮಾರ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ. ಎರಡು ಸೇನೆಗಳ ನಡುವಿನ ಸಹಕಾರದ ಇತಿಹಾಸವೇ ಇದೆ. ಭಯೋತ್ಪಾದಕರ ನಿರ್ಮೂಲನೆಗೆ ಎರಡು ಸೇನೆಗಳು ಒಟ್ಟಾಗಿ ಕೆಲಸ ಮಾಡಲಿವೆ" ಎಂದು ಮೇಜರ್ ಜನರಲ್ ರಣಬೀರ್ ಸಿಂಗ್ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT