ಆಧ್ಯಾತ್ಮ ಗುರು ದಲೈಲಾಮ 
ಪ್ರಧಾನ ಸುದ್ದಿ

ಆಸ್ಟ್ರೇಲಿಯಾ ಮೂಲನಿವಾಸಿಗಳನ್ನು ಭೇಟಿಮಾಡಿದ ದಲೈಲಾಮ

೧೦ ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ದಲೈಲಾಮ ಉಲುರುನಲ್ಲಿ ಅಲ್ಲಿನ ಮೂಲನಿವಾಸಿಗಳು, ಸಾಂಪ್ರದಾಯಿಕ ಮಾಲಿಕರೊಂದಿಗೆ ಭೇಟಿ ಮಾಡಿ

ಕ್ಯಾನ್ಬೆರ್ರಾ: ೧೦ ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ದಲೈಲಾಮ ಉಲುರುನಲ್ಲಿ ಅಲ್ಲಿನ ಮೂಲನಿವಾಸಿಗಳು, ಸಾಂಪ್ರದಾಯಿಕ ಮಾಲಿಕರೊಂದಿಗೆ ಭೇಟಿ ಮಾಡಿ ಮೂಲನಿವಾಸಿಗಳ ಸಂಸ್ಕೃತಿ ಉಳಿಸಲು ಹೆಚ್ಚಿನ ಕೆಲಸವಾಗಬೇಕಿದೆ ಎಂದಿದ್ದಾರೆ.

ಅಲೈಸ್ ಸ್ಪ್ರಿಂಗ್ಸ್ ನಗರದಿಂದ ೪೫೦ ಕಿಮೀ ದೂರದಲ್ಲಿರುವ ಉತ್ತರ ಪ್ರಾಂತದ ಕೆಂಪು ಕೆಂದ್ರದ ಮರುಭೂಮಿಯ ಉಲುರು ಅಥವಾ ಆಯೆರ್ಸ್ ಕಲ್ಲು ೭೦೦ ವರ್ಷಗಳಷ್ಟು ಪ್ರಾಚೀನವಾದದ್ದು ಮತ್ತು ಮೂಲನಿವಾಸಿಗಳಿಗೆ ಪವಿತ್ರವಾದದ್ದು ಎಂಬ ನಂಬಿಕೆಯಿದೆ.

ಉರುಲುಗೆ ಪ್ರಥಮ ಭೇಟಿ ನೀಡಿರುವ ೭೯ ವರ್ಷದ ದಲೈಲಾಮಾ ಪವಿತ್ರ ಪ್ರದೇಶ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು ಎಂದು ಕರೆಕೊಟ್ಟಿದ್ದಾರೆ.

ಪ್ರಾದೇಶಿಕ ಸಂಸ್ಕೃತಿಯ ಸಂಕೀರ್ಣತೆಯನ್ನು ಕಂಡು ಆಶ್ಚರ್ಯಚಕಿತನಾದೆ ಎಂದು ಭಾರತದಲ್ಲಿ ರಾಜಕೀಯ ಆಶ್ರಯ ಪಡೆದಿರುವ ಟಿಬೆಟ್ ಆಧ್ಯಾತ್ಮ ಗುರು ದಲೈಲಾಮ ತಿಳಿಸಿದ್ದು, ಅಪೂರ್ವ ಮೂಲನಿವಾಸಿಗಳ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ನೆರೆದವರೆಲ್ಲ ಶ್ರಮ ಪಡಬೇಕು ಮತ್ತು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾಂಪ್ರದಾಯಿಕ ಜ್ಞಾನವನ್ನು ಉಳಿಸಿಕೊಳ್ಳಬೇಕು ಎಂದಿದ್ದಾರೆ.

ಸಾಂಪ್ರದಾಯಿಕ ಹೆಸರುಗಳನ್ನು ಕೂಡ ಉಳಿಸಿಕೊಳ್ಳುವಂತೆ ಅವರು ಮೂಲನಿವಾಸಿಗಳಲ್ಲಿ ಕೇಳಿಕೊಂಡಿದ್ದಾರೆ.

ಸೋಮವಾರ ಪರ್ತ್ ಗೆ ಭೇಟಿ ನೀಡುವ ಮೂಲಕ ದಲೈಲಾಮ ತಮ್ಮ ಆಸ್ಟ್ರೇಲಿಯಾ ಪ್ರವಾಸವನ್ನು ಮುಗಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT