ಜಿತೇಂದ್ರ ಸಿಂಗ್ ತೋಮರ್ 
ಪ್ರಧಾನ ಸುದ್ದಿ

ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ತೋಮರ್

ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ನವದೆಹಲಿ: ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ಇಂದು ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೋಮರ್ ಅವರನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ತೋಮರ್ ಅವರನ್ನು ಮತ್ತೆರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ನಕಲಿ ಪ್ರಮಾಣ ಪತ್ರ ಹೊಂದಿದೆ ಆರೋಪದ ಮೇಲೆ ಕಳೆದ ಮಂಗಳವಾರ ದೆಹಲಿ ಕಾನೂನು ಸಚಿವರಾಗಿದ್ದ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ದೆಹಲಿಯ ಮೆಟ್ರೋಪಾಲಿಟನ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಇನ್ನು ಪ್ರಕರಣದಿಂದ ಆಪ್ ಪಕ್ಷ ತೀವ್ರ ಮುಜುಗರಕ್ಕೀಡಾದ ಹಿನ್ನಲೆಯಲ್ಲಿ ತೋಮರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ತೋಮರ್ ರಾಜಿನಾಮೆ ಪತ್ರವನ್ನು ಅಂಗೀಕರಿಸಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜಿನಾಮೆ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ರವಾನೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT