ಜಿತೇಂದ್ರ ಸಿಂಗ್ ತೋಮರ್ 
ಪ್ರಧಾನ ಸುದ್ದಿ

ತೋಮರ್ ಬಿಎಸ್ಸಿ ಪ್ರಮಾಣ ಪತ್ರ ಕೂಡ ನಕಲಿ

ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ಬಿಎಸ್ಸಿ ಪದವಿ ಪ್ರಮಾಣ ಪತ್ರ ಕೂಡ ನಕಲು ಎಂದು ತಿಳಿದುಬಂದಿದೆ.

ನವದೆಹಲಿ: ನಕಲಿ ಕಾನೂನು ಪದವಿ ಪ್ರಮಾಣಪತ್ರ ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ಬಿಎಸ್ಸಿ ಪದವಿ ಪ್ರಮಾಣ ಪತ್ರ ಕೂಡ ನಕಲು ಎಂದು ತಿಳಿದುಬಂದಿದೆ.

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಜಿತೇಂದ್ರ ಸಿಂಗ್ ತೋಮರ್ ಅವರ ಬಿಎಸ್ಸಿ ಪದವಿ ಪತ್ರ ಕೂಡ ನಕಲು ಎಂಬುದು ಮನವರಿಕೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳ ಪ್ರಕಾರ ಜಿತೇಂದ್ರ ಸಿಂಗ್ ತೋಮರ್ ಅವರಿಗೆ ತಮ್ಮ ವಿದ್ಯಾಭ್ಯಾಸದ ಕುರಿತು ಯಾವುದೇ ರೀತಿಯ ಜ್ಞಾನವಿಲ್ಲ. ಅವರ ಫೈಜಾಬಾದ್ ಅವಧ್ ವಿವಿ ಮತ್ತು ಆಯೋಧ್ಯಾ ಸಾಕೇತ್ ಕಾಲೇಜಿಗೆ ಸಂಬಂಧಿಸಿದ ಶೈಕ್ಷಣಿಕ ಪ್ರಶ್ನೆಗಳಿಗೆ ತೋಮರ್ ಸರಿಯಾದ ಉತ್ತರ ನೀಡಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನು ಕಾಲೇಜು ಮೂಲಗಳ ಪ್ರಕಾರ ಜಿತೇಂದ್ರ ಸಿಂಗ್ ತೋಮರ್ ಅವರಿಗೆ ಈ ವಿಶ್ವವಿದ್ಯಾಲಯಗಳಿಂದ ಯಾವುದೇ ರೀತಿಯ ಪದವಿ ಪ್ರಮಾಣ ಪತ್ರ ನಿಡಿರುವ ಕುರಿತು ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ತೋಮರ್ ಅವರ ಕಾನೂನು ಪದವಿ ಪ್ರಮಾಣ ಪತ್ರ ಕುರಿತ ತನಿಖೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.ಆದರೆ ಬಿಹಾರದ ಮುಂಗರ್ ನಲ್ಲಿರುವ ವಿಶ್ವನಾಖ್ ಸಿಂಗ್ ಕಾನೂನು ಕಾಲೇಜಿನಲ್ಲಿ ಜಿತೇಂದ್ರ ಸಿಂಗ್ ತೋಮರ್ ಅವರ ಹೆಸರು ನೊಂದಾವಣಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿತೇಂದ್ರ ಸಿಂಗ್ ತೋಮರ್ ಅವರ ನಾಲ್ಕು ದಿನಗಳ ಬಂಧನದ ಅವಧಿ ಇಂದು ಮುಕ್ತಾಯಗೊಳ್ಳಲ್ಲಿದ್ದು, ದೆಹಲಿ ಪೊಲೀಸರು ಇಂದು ಅವರನ್ನು ಸಾಕೇತ್ ಕೋರ್ಟ್ ಗೆ ಹಾಜರು ಪಡಿಸುವ ಸಾಧ್ಯತೆ ಇದೆ. ಅಲ್ಲದೆ ವಿಚಾರಣೆಗಾಗಿ ಮತ್ತಷ್ಟು ದಿನಗಳ ಕಾಲಾವಕಾಶ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT