ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಬುಡಕಟ್ಟು ಕಲ್ಯಾಣ ಯೋಜನೆಗಳ ಪ್ರಗತಿ ಪರಿಶೀಲಿಸಿದ ಪ್ರಧಾನಿ ಮೋದಿ

ಬುಡುಕಟ್ಟು ಕಲ್ಯಾಣಕ್ಕೆ ಜಾರಿಯಾಗಿರುವ ವಿವಿಧ ಯೋಜನೆಗಳ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ

ನವದೆಹಲಿ: ಬುಡುಕಟ್ಟು ಕಲ್ಯಾಣಕ್ಕೆ ಜಾರಿಯಾಗಿರುವ ವಿವಿಧ ಯೋಜನೆಗಳ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪರಿಶೀಲಿಸಿದ್ದಾರೆ.

ವನಬಂಧು ಕಲ್ಯಾಣ ಯೋಜನೆಯನ್ನು ಒಳಗೊಂಡತೆ ವಿವಿಧ ಬುಡಕಟ್ಟು ಕಲ್ಯಾಣ ಯೋಜನೆಗಳ ಪರಿಶೀಲನಾ ಸಭೆ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ರಾಷ್ಟ್ರದಾದ್ಯಂತ ವಿವಿಧ ಬುಡಕಟ್ಟು ಜನಾಂಗದ ಒಳಿತಿಗಾಗಿ ಜಾರಿಗೆ ತರಲಾಗಿರುವ ಈ ಯೋಜನೆಗಳ ನಡುವೆ ಹೆಚ್ಚಿನ ಹೊಂದಾಣಿಕೆ ಅಗತ್ಯ ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಪ್ರಧಾನ ಮಂತ್ರಿ ಸಚಿವಾಲಯ ನೀಡಿರುವ ಹೇಳಿಕೆಯಲ್ಲಿ ಕೇಂದ್ರ ಸರ್ಕಾರ ಇಲಾಖೆಗಳು ಮತ್ತು ರಾಜ್ಯ ಸರ್ಕಾರ ಹೊಂದಾಣಿಕೆಯಲ್ಲಿ ಕೆಲಸ ಮಾಡಿ ಬುಡಕಟ್ಟು ಕಲ್ಯಾಣದ ಗುರಿಗಳನ್ನು ಮುಟ್ಟಬೇಕು ಎಂದು ಪ್ರಧಾನಿ ಹೇಳಿದ್ದಾರೆ ಎಂದಿದೆ.

ಬುಡಕಟ್ಟು ಸಮುದಾಯದ ಜನರಲ್ಲಿ ಸಿಕಲ್ ಸೆಲ್ ಅನೆಮಿಯಾ ರಕ್ತ ಕೋಶದ ತೊಂದರೆಯನ್ನು(ರಕ್ತ ಹೀನತೆ) ಪತ್ತೆ ಹಚ್ಚುವ ಪ್ರಗತಿಯ ಬಗ್ಗೆ ಮೋದಿ ವಿವರಣೆ ಕೇಳಿದರು ಎಂದು ಹೇಳಿಕೆ ತಿಳಿಸಿದೆ.

ಜನ ಧನ ಯೋಜನೆ ಮತ್ತು ಇತರ ಸಾಮಾಜಿಕ ಭದ್ರತಾ ಯೋಜನೆಗಳು ಬುಡಕಟ್ಟು ಸಮುದಾಯಗಳಿಗೆ ಹೇಗೆ ಸಹಾಯ ಮಾಡುತ್ತಿವೆ ಎಂಬುದನ್ನು ಕೂಡ ತಿಳಿದುಕೊಳ್ಳಲು ಪ್ರಯತ್ನಿಸಿದರು ಎಂದು ವರದಿ ತಿಳಿಸಿದೆ.

ಬುಡಕಟ್ಟು ಸಮುದಾಯದ ಸಾಂಸ್ಕೃತಿಕ ಹಬ್ಬವನ್ನು ಆಚರಿಸುವ ಬಗ್ಗೆಯೂ ಪ್ರಧಾನಿ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬುಡಕಟ್ಟು ವ್ಯವಹಾರಗಳ ಸಚಿವ ಜುವಲ್ ಓರಾಮ್ ಮತ್ತು ಹಿರಿಯ ಅಧಿಕಾರಿಗಳು ಈ ಉನ್ನತ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!